11:31 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕ್ರೀಡೆಯಲ್ಲೂ ಸೈ, ಓದಿನಲ್ಲೂ ಸೈ; ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ

18/04/2024, 16:36

ಸಂತೋಷ್ ಅತ್ತಿಗರೆ ಚಿಕ್ಕಮಗಳೂರು

info.reporterkarnataka@gmail.com

ಕ್ರೀಡೆಯಲ್ಲಿ ಸಾಧನೆ ಮಾಡಿ ಓದಿನಲ್ಲೂ ಸಾಧನೆ ಮಾಡುವ ವಿದ್ಯಾರ್ಥಿಗಳು ಬಹಳ ವಿರಳ.ಅದರಲ್ಲೂ ಕ್ರೀಡೆಯ ಬೆನ್ನೇರಿ ಸಾಧನೆ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೂ ವಾಣಿಜ್ಯ ವಿಭಾಗದಲ್ಲಿ ಶೇ. 90.83 ಅಂಕ ಪಡೆದಿರುವ ದುರ್ಗದಹಳ್ಳಿಯ ಡಿ.ಬಿ.ಶಬರಿ ಕ್ರೀಡೆಯಲ್ಲೂ ಸೈ ಓದಿನಲ್ಲಿಯೂ ಸೈ ಎಂಬಂತೆ ಉತ್ತಮ ಅಂಕ ಪಡೆದು ಮಲೆನಾಡಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿ ಡಿ.ಬಿ.ಶಬರಿ ಕಾಫಿನಾಡಿನ ಕ್ರೀಡಾಪಟುb4*100 ರಿಲೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಪಡೆದಿರುವ ಪ್ರತಿಭಾವಂತೆ. ಇವರು ಬಾಳೂರು ಹೋಬಳಿ ದುರ್ಗದಹಳ್ಳಿಯ ಕೃಷಿಕರಾದ ಡಿ.ಪಿ.ಬಾಲಕೃಷ್ಣ ಹಾಗೂ ಎಂ.ಎಸ್.ಅಶ್ವಿನಿ ಅವರ ಪುತ್ರಿಯಾಗಿದ್ದಾರೆ.ಇವರು ಮೂಡಬಿದರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಪ್ರಸ್ತುತ ಹರ್ಡಲ್ಸ್ ನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇವರ ಕ್ರೀಡೆ ಹಾಗೂ ಶೈಕ್ಷಣಿಕ ಸಾಧನೆಗೆ ಪೋಷಕರು,ಗ್ರಾಮಸ್ಥರು ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ. ‘ಪಿಯುಸಿ ನಂತರ ಬಿಬಿಎ, ಎಂಬಿಎ ವ್ಯಾಸಂಗ ಮಾಡಿ ಉತ್ತಮ ಕ್ರೀಡಾಪಟು ಆಗಿ ಸರ್ಕಾರಿ ಅಧಿಕಾರಿಯಾಗಬೇಕು’ ಎಂಬುದು ನನ್ನ ಮಹದಾಸೆ ಎಂದು ವಿದ್ಯಾರ್ಥಿನಿ ಡಿ.ಬಿ.ಶಬರಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು