8:24 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

Sports | ಕಾಟಿಪಳ್ಳ ಇನ್ಫೆಂಟ್ ಮೇರಿ ಶಾಲಾ ತಂಡಗಳು ವಿಭಾಗಮಟ್ಟಕ್ಕೆ ಆಯ್ಕೆ

11/10/2025, 20:36

ಮಂಗಳೂರು(reporterkarnataka.com): ಮಂಗಳೂರು ಉತ್ತರ ವಲಯದಲ್ಲಿ ಪ್ರಥಮ ಸ್ಥಾನಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಖೊಖೊ ಪಂದ್ಯಾಟಗಳಲ್ಲಿ ಭಾಗವಹಿಸಿದ ಇನ್ಫೆಂಟ್ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕಾಟಿಪಳ್ಳ ನೇತೃತ್ವದ ೧೪ ವರ್ಷ ವಯೋಮಿತಿಯೊಳಗಿನ ಹಾಗೂ ೧೭ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ನಾಲ್ಕೂ ವಿಭಾಗಗಳ ತಂಡಗಳು ಜಯಶಾಲಿಯಾಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಸಂಚಾಲಕರಾದ ಫಾ| ಸಂತೋಷ್ ಲೋಬೋ ತಿಳಿಸಿದ್ದಾರೆ.


ಮುಖ್ಯ ಶಿಕ್ಷಕರಾದ ಫ್ರಾನ್ಸಿಸ್ ಡಿಕೂನ್ಹಾರವರ ಮಾರ್ಗದರ್ಶನದಲ್ಲಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ವಿನ್ಯಾಸ್ ರವರು ತರಬೇತಿ ನೀಡಿದ್ದರು. ಜಿಲ್ಲಾ ಮಟ್ಟದ ಖೊಖೊ ಪಂದ್ಯಾಟಗಳು ಪುತ್ತೂರು ತಾಲೂಕಿನ ಶ್ರೀಗೋಪಾಲಕೃಷ್ಣ ಅನುದಾನಿತ ಪ್ರೌಢಶಾಲೆ, ಬಿಳಿನೆಲೆಯಲ್ಲಿ ಅಕ್ಟೋಬರ್ ೯ರಂದು ನಡೆದು ಈ ಪಂದ್ಯಾಟಗಳಲ್ಲಿ ಬೆಸ್ಟ್ ಆಲ್ ರೌಂಡರ್ ಆಗಿ ಶೈಲಿ, ಮಯೂರ್, ಕನ್ನಿಕಾ ಶೆಟ್ಟಿ ಮತ್ತು÷ಹಸನ್ ಸಾದ್ ಆಯ್ಕೆಯಾದರು. ಬೆಸ್ಟ್ ರನ್ನರ್ ಆಗಿ ಜಯಲಕ್ಷ್ಮಿ ಮತ್ತು ಜಾಹ್ನವಿ, ಬೆಸ್ಟ್ ಚೇಜರ್ ಆಗಿ ವರ್ಷಿತ್ ಜೆ ಶೆಟ್ಟಿ ಪುರಸ್ಕೃತರಾದರು. ಅಲ್ಲದೆ ಬಜ್ಪೆಯ ಸೈಂಟ್ ಜೋಸೆಫ್ ಪ್ರೌಢಶಾಲೆಯ ಅಫ್ರಾಜ್ ವೈಯುಕ್ತಿಕ ಪ್ರಶಸ್ತಿ ಪಡೆದರು. ಮೈಸೂರು ವಿಭಾಗ ಮಟ್ಟದ ಖೊಖೊ ಪಂದ್ಯಾಟಗಳು ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ ೧೨ ಮತ್ತು ೧೩ ರಂದು ನಡೆಯಲಿದ್ದು ಈ ತಂಡಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿವೆ.

ಇತ್ತೀಚಿನ ಸುದ್ದಿ

ಜಾಹೀರಾತು