8:44 PM Saturday25 - April 2026
ಬ್ರೇಕಿಂಗ್ ನ್ಯೂಸ್
ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ…

ಇತ್ತೀಚಿನ ಸುದ್ದಿ

Sports | ಕಾಟಿಪಳ್ಳ ಇನ್ಫೆಂಟ್ ಮೇರಿ ಶಾಲಾ ತಂಡಗಳು ವಿಭಾಗಮಟ್ಟಕ್ಕೆ ಆಯ್ಕೆ

11/10/2025, 20:36

ಮಂಗಳೂರು(reporterkarnataka.com): ಮಂಗಳೂರು ಉತ್ತರ ವಲಯದಲ್ಲಿ ಪ್ರಥಮ ಸ್ಥಾನಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಖೊಖೊ ಪಂದ್ಯಾಟಗಳಲ್ಲಿ ಭಾಗವಹಿಸಿದ ಇನ್ಫೆಂಟ್ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕಾಟಿಪಳ್ಳ ನೇತೃತ್ವದ ೧೪ ವರ್ಷ ವಯೋಮಿತಿಯೊಳಗಿನ ಹಾಗೂ ೧೭ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ನಾಲ್ಕೂ ವಿಭಾಗಗಳ ತಂಡಗಳು ಜಯಶಾಲಿಯಾಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಸಂಚಾಲಕರಾದ ಫಾ| ಸಂತೋಷ್ ಲೋಬೋ ತಿಳಿಸಿದ್ದಾರೆ.


ಮುಖ್ಯ ಶಿಕ್ಷಕರಾದ ಫ್ರಾನ್ಸಿಸ್ ಡಿಕೂನ್ಹಾರವರ ಮಾರ್ಗದರ್ಶನದಲ್ಲಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ವಿನ್ಯಾಸ್ ರವರು ತರಬೇತಿ ನೀಡಿದ್ದರು. ಜಿಲ್ಲಾ ಮಟ್ಟದ ಖೊಖೊ ಪಂದ್ಯಾಟಗಳು ಪುತ್ತೂರು ತಾಲೂಕಿನ ಶ್ರೀಗೋಪಾಲಕೃಷ್ಣ ಅನುದಾನಿತ ಪ್ರೌಢಶಾಲೆ, ಬಿಳಿನೆಲೆಯಲ್ಲಿ ಅಕ್ಟೋಬರ್ ೯ರಂದು ನಡೆದು ಈ ಪಂದ್ಯಾಟಗಳಲ್ಲಿ ಬೆಸ್ಟ್ ಆಲ್ ರೌಂಡರ್ ಆಗಿ ಶೈಲಿ, ಮಯೂರ್, ಕನ್ನಿಕಾ ಶೆಟ್ಟಿ ಮತ್ತು÷ಹಸನ್ ಸಾದ್ ಆಯ್ಕೆಯಾದರು. ಬೆಸ್ಟ್ ರನ್ನರ್ ಆಗಿ ಜಯಲಕ್ಷ್ಮಿ ಮತ್ತು ಜಾಹ್ನವಿ, ಬೆಸ್ಟ್ ಚೇಜರ್ ಆಗಿ ವರ್ಷಿತ್ ಜೆ ಶೆಟ್ಟಿ ಪುರಸ್ಕೃತರಾದರು. ಅಲ್ಲದೆ ಬಜ್ಪೆಯ ಸೈಂಟ್ ಜೋಸೆಫ್ ಪ್ರೌಢಶಾಲೆಯ ಅಫ್ರಾಜ್ ವೈಯುಕ್ತಿಕ ಪ್ರಶಸ್ತಿ ಪಡೆದರು. ಮೈಸೂರು ವಿಭಾಗ ಮಟ್ಟದ ಖೊಖೊ ಪಂದ್ಯಾಟಗಳು ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ ೧೨ ಮತ್ತು ೧೩ ರಂದು ನಡೆಯಲಿದ್ದು ಈ ತಂಡಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿವೆ.

ಇತ್ತೀಚಿನ ಸುದ್ದಿ

ಜಾಹೀರಾತು