8:54 PM Tuesday1 - September 2026
ಬ್ರೇಕಿಂಗ್ ನ್ಯೂಸ್
ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

Sports News | ಕಿಕ್‌ಬಾಕ್ಸಿಂಗ್‌ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಬಜಪೆಯ ಹುಡುಗ ಹೈಮಾನ್

13/08/2021, 14:19

ಬಜಪೆ (ReporterKarnataka.com)

ವಾಕೊ ಇಂಡಿಯಾ, ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಶನ್ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮೈಸೂರಿನಲ್ಲಿ ನಡೆದ ಪ್ರಥಮ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಬಂಗಾರದ ಪದಕ ಗೆದ್ದು ಬಜಪೆಯ ಹೈಮಾನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಜ್ಯ ಮಟ್ಟದಲ್ಲಿ ರಿಂಗ್ ಫೈಟ್ ಲೋ ಕಿಕ್ ವಿಭಾಗದಲ್ಲಿ ಸ್ಪರ್ಧಿಸಿ ಪ್ರಶಸ್ತಿ ಗೆದ್ದಿರುವ ಹೈಮಾನ್
ಮಾರ್ಷಲ್ ಆರ್ಟ್ಸ್‌ನ ಕರಾಟೆ ಹಾಗೂ ಇತರ ಮಾದರಿಗಳಲ್ಲಿಯೂ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಸ್ಪರ್ಧಿಸಿ ಪದಕಗಳನ್ನು ಜಯಿಸಿದ್ದಾರೆ. ಈಗ ಕಿಕ್ ಬಾಕ್ಸಿಂಗ್‌ನಲ್ಲಿಯೂ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವುದು ಕರಾವಳಿಯ ಮಾರ್ಷಲ್ ಆರ್ಟ್ಸ್ ಪ್ರಿಯರಿಗೆ ಹರುಷವನ್ನು ತಂದಿದೆ.

ರಾಷ್ಟ್ರೀಯ ಕಿಕ್‌ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೋವಾದಲ್ಲಿ ನಡೆಯಲಿದೆ. ಇದರಲ್ಲಿ ಆಯ್ಕೆಯಾದರೆ ಬ್ಯಾಂಕಾಕ್‌ನಲ್ಲಿ ನಡೆಯಲಿರುವ ಏಷ್ಯನ್ ಇಂಡೋರ್ ಹಾಗೂ ಮಾರ್ಷಿಯಲ್ ಆರ್ಟ್ಸ್ ಗೇಮ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಪ್ರಸ್ತುತ ಹೈಮಾನ್ ಮಾರ್ಷಲ್ ಆರ್ಟ್ಸ್ ತರಬೇತುದಾರ ನಿತಿನ್ ಎನ್.ಸುವರ್ಣ ಹಾಗು ಸಹಾಯಕ ತರಬೇತುದಾರ ಸಂಪತ್ ಕುಮಾರ್ ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು