11:51 PM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಸ್ಫೋಟದಿಂದ ಗಾಯಗೊಂಡ ರಿಕ್ಷಾ ಚಾಲಕರಿಗೆ ನೆರವಿನ ಭರವಸೆ: ಪದ್ಮರಾಜ್ ಸಹಿತ ಹಲವರು ಭೇಟಿ

21/11/2022, 23:51

ಮಂಗಳೂರು(reporter Karnataka.com): ರಿಕ್ಷಾ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋರಿಗುಡ್ಡೆ ನಿವಾಸಿ ಪುರುಷೋತ್ತಮ ಪೂಜಾರಿ ಅವರನ್ನು ಕುದೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಬಿಲ್ಲವ ಬ್ರಿಗೇಡ್ ಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ, ಕೃತಿನ್, ಗೆಜ್ಜೆಗಿರಿ ಕ್ಷೇತ್ರದ ವಕ್ತಾರ ರಾಜೇಂದ್ರ ಚಿಲಿಂಬಿ ಭೇಟಿಯಾಗಿ ಎಲ್ಲ ರೀತಿಯ ಸಹಾಯ ನೀಡುವುದದಾಗಿ ಭರವಸೆ ನೀಡಿದರು.
ಬಳಿಕ ಪತ್ನಿ, ಮಕ್ಕಳ ಜತೆ ಸಮಾಲೋಚನೆ ನಡೆಸಿ ಅವರಿಗೂ ಧೈರ್ಯ ತುಂಬಿದರು.

ಪುರುಷೋತ್ತಮ ಅವರು 25 ವರ್ಷಗಳಿಂದ ರಿಕ್ಷಾದಿಂದ ದುಡಿದು ಕುಟುಂಬವನ್ನು ಮುನ್ನಡೆಸುತ್ತಿದರು. ಇದೀಗ ರಿಕ್ಷಾವನ್ನು ಪೊಲೀಸರು ಮುಟ್ಟುಗೋಲು ಹಾಕಿದ್ದು ಭಯೋತ್ಪಾದಕ ಕೃತ್ಯವಾದ ಕಾರಣ ಸದ್ಯ ಬಿಡುಗಡೆ ಭಾಗ್ಯವಿಲ್ಲ. ಮಗಳಿಗೆ ಮದುವೆ ಕೂಡ ಫಿಕ್ಸ್ ಆಗಿದ್ದು ಇಂತಹ ಸಂಕಷ್ಟವನ್ನು ಅರಿತು ಅವರ ಕುಟುಂಬಕ್ಕೆ ಧೈರ್ಯ ತುಂಬಿ ನಿಮ್ಮ ಜೊತೆ ನಮ್ಮ ಸಮಾಜ ಕೂಡ ಇದೆ ಎಂದು ಧೈರ್ಯ ತುಂಬಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು