12:33 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸಾಹಿತ್ಯ ಪೋಷಕ ಡಾ.ಕೆ.ವಿ.ದೇವಪ್ಪ ಮಂಗಳೂರು ಅವರಿಗೆ ಸಮಾಜ ಸೇವಾರತ್ನ ರಾಜ್ಯ ಪ್ರಶಸ್ತಿ ಪ್ರದಾನ

03/11/2023, 10:20

ಮಂಗಳೂರು(reporterkarnataka.com): ಕಥಾಬಿಂದು ಪ್ರಕಾಶನದ 16ನೇ ವಾರ್ಷಿಕೋತ್ಸವದ ಪ್ರಯುಕ್ತ ನಗರದ ಪುರಭವನದಲ್ಲಿ ನಡೆದ ಸಾಹಿತ್ಯೋತ್ಸವ 2023 ಕಾರ್ಯಕ್ರಮದಲ್ಲಿ ಸಾಹಿತ್ಯ ಪೋಷಕ ಡಾ .ಕೆ .ವಿ. ದೇವಪ್ಪ ಮಂಗಳೂರು ಅವರಿಗೆ ಕಥಾಬಿಂದು “ಸಮಾಜ ಸೇವಾ ರತ್ನ “ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಹಿತ್ಯ ಸಂಭ್ರಮದಲ್ಲಿ ಸಮಾಜ ಸೇವಕ, ಸಾಹಿತ್ಯ ಪೋಷಕ ಶ್ರೀ ಡಾ .ಕೆ .ವಿ. ದೇವಪ್ಪ ಅವರಿಗೆ
ಪ್ರಶಸ್ತಿ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಉದ್ಘಾಟಕರಾದ ದ. ಕ. ಸಹಾಯಕ ಅರಣ್ಯಧಿಕಾರಿ ಶ್ರೀಧರ್ ಕಾಸರಗೋಡು, ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಕೆ. ವಾಮನ್ ರಾವ್ ಬೇಕಲ್, ಸುಂದರ್ ಶೆಟ್ಟಿ, ದ. ಕ. ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಪಮ್ಮಿ ಕೊಡಿಯಾಲಬೈಲ್, ಕಥಾಬಿಂದು ಪ್ರಕಾಶಕ ಪ್ರದೀಪ್ ಕುಮಾರ್, ಸಾಹಿತಿ ಜಯಾನಂದ ಪೆರಾಜೆ, ಕವಯತ್ರಿ ರೇಖಾ ಸುದೇಶ್ ರಾವ್, ಸಾಹಿತಿ ಕೋಲ್ಚಪ್ಪೆ ಗೋವಿಂದ ಭಟ್ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು