5:46 AM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಶ್ರೀ ನಿಟಿಲಾಪುರ ಸದಾಶಿವ ಮಹಾದ್ವಾರ ಲೋಕಾರ್ಪಣೆ: ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ

15/03/2023, 19:35

ಬಂಟ್ವಾಳ(reporterkarnataka.com):
ಶಿವಶಕ್ತಿ ಬ್ರದರ್ಸ್ ನಿಟಿಲಾಪುರ (ರಿ.) ಟ್ರಸ್ಟ್ ಹಾಗೂ ಊರ ಪರವೂರ ದಾನಿಗಳ ಸಹಕಾರದಿಂದ ನೂತನವಾಗಿ ನಿರ್ಮಿಸಿರುವ “ಶ್ರೀ ನಿಟಿಲಾಕ್ಷ ಸದಾಶಿವ ಮಹಾದ್ವಾರ” ದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಹಾದ್ವಾರವನ್ನು ದೀಪ ಬೆಳಗಿಸಿ ಹಾಗೂ ತೆಂಗಿನಕಾಯಿ ಒಡೆಯುವ ಮೂಲಕ ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದರು .
ಅದೇ ರೀತಿ ಶಾಸಕರ ಅನುದಾನದಲ್ಲಿ ನೆಟ್ಲ ದ್ವಾರದಿಂದ ನಿಟಿಲಾಪುರ ದೇವಾಲಯದವರೆಗೆ ನಿರ್ಮಾಣವಾದ ನೂತನ ಕಾಂಕ್ರೀಟ್ ರಸ್ತೆಯನ್ನೂ ಸಾಂಕೇತಿಕವಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉದ್ಘಾಟಿಸಿದರು.
ಸರಿಯಾಗಿ 24 ವರ್ಷಗಳ ಹಿಂದೆ(14-03-1999) ಉದ್ಘಾಟನೆ ಯಾಗಿದ್ದ ಹಿಂದಿನ ಮಹಾದ್ವಾರವೂ ಶಿವಶಕ್ತಿ ಬ್ರದರ್ಸ್ ನೇತೃತ್ವದಲ್ಲಿ ಇದೀಗ ಸಂಘಟನೆಗೆ 25 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಹಳೆ ದ್ವಾರವನ್ನು ಕೆಡವಿ ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ಹೊಸ ದ್ವಾರವನ್ನು ನಿರ್ಮಿಸಲಾಗಿದೆ. ನಂತರ ನಿಟಿಲಾಪುರ ದೇವಾಲಯದ ಬಳಿ ಶಿವಶಕ್ತಿ ಬ್ರದರ್ಸ್ ನಿಟಿಲಾಪುರ ಟ್ರಸ್ಟ್ ಹಾಗೂ ಊರ ಭಕ್ತಾದಿಗಳ ಸಹಕಾರದಿಂದ ನೂತನವಾಗಿ ನಿರ್ಮಾಣಗೊಂಡ ಕಾಣಿಕೆಹುಂಡಿಯನ್ನೂ ದೇವಳಕ್ಕೆ ಸಮರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷ ಅಭಿಷೇಕ್ ಶೆಟ್ಟಿ, ವಿಟ್ಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರುಗಳಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಕಾರ್ಯಕಾರಿ ಸದಸ್ಯರಾದ ಕಶೆಕೋಡಿ ಸೂರ್ಯನಾರಾಯಣ ಭಟ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಪೂಜಾರಿ, ಗೋಳ್ತಮಜಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಜಗನ್ನಾಥ ಕುಲಾಲ್ ಹಾಗೂ ಮೋನಪ್ಪ ದೇವಸ್ಯ ಶಿವಶಕ್ತಿ ಬ್ರದರ್ಸ್ ಇದರ ಅಧ್ಯಕ್ಷ ಮನೋಜ್ ಗಟ್ಟಿ ನೆಟ್ಲಾ ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು