11:33 PM Tuesday1 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌

ಇತ್ತೀಚಿನ ಸುದ್ದಿ

ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಬಹುಭಾಷಾ ಕವಿಗೋಷ್ಠಿ; ಪ್ರಕೃತಿಯ ವಿಸ್ಮಯಗಳು ಕವನ ರಚನೆಗೆ ಪ್ರೇರಕ ಎಂದ ಸಾಹಿತಿ ಪ್ರೊ. ರಾಜಮಣಿ ರಾಮಕುಂಜ

20/06/2024, 18:48

ಬಂಟ್ವಾಳ(reporterkarnataka.com): ಪ್ರಕೃತಿಯ ವಿಚಾರಗಳಿಂದ ನಾವು ವಿಸ್ಮಿತರಾಗುತ್ತೇವೆ. ವಿಸ್ಮಯಗಳು ಪ್ರಚೋದಿಸಿ ಹೃದಯದ ಭಾಷೆಯಾಗಿ ಕವನ ರೂಪದಲ್ಲಿ ಹೊರಹೊಮ್ಮುತ್ತದೆ. ಕವನ ಬುದ್ದಿಯ ಭಾಷೆ ಅಲ್ಲ, ಅದು ಹೃದಯದ ಭಾಷೆ . ಕವನವನ್ನು ಓದಿದಾಗ , ಹಾಡಿದಾಗ ಪ್ರಭಾವಿಸುತ್ತದೆ ಎಂದು ಸಾಹಿತಿ ಪ್ರೊ. ರಾಜಮಣಿ ರಾಮಕುಂಜ ಹೇಳಿದರು.


ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಸಹಯೋಗದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪದವಿ ಮತ್ತು ಪಿಯುಸಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಪರಿಸರ ಸಂಬಂಧಿತ ಸ್ವರಚಿತ ಕವಿತೆಗಳನ್ನು ವಾಚನ ಮಾಡಿದರು. ವೈಷ್ಣವಿ ಕಲ್ಲಡ್ಕ ನಿರೂಪಿಸಿದರು.
ಹಿರಿಯ ಪತ್ರಕರ್ತ ಜಯಾನಂದ ಪೆರಾಜೆಯವರ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ಜರಗಿತು. ಕವಯಿತ್ರಿ ಅಪೂರ್ವ ಕಾರಂತ್ ಪುತ್ತೂರು ನಿರೂಪಿಸಿದರು.
ಕವಿಗಳಾದ ಡಾ. ಸುರೇಶ ನೆಗಳಗುಳಿ, ರೆಮಂಡ್ ಡಿಕುನ್ಹಾ ತಾಕೊಡೆ, ಪಂಕಜಾ ಮುಡಿಪು , ಶಾಂತಾ ಪುತ್ತೂರು, ಜಯಶ್ರೀ ಶೆಣೈ ಬಂಟ್ವಾಳ , ಸೋನಿತಾ ನೇರಳಕಟ್ಟೆ , ಜಯರಾಮ ಪಡ್ರೆ, ಹೇಮಾವತಿ ಸಾಲೆತ್ತೂರು, ಋತ್ವಿಕ್ ಮೊಳೆಯಾರ, ವಿಶ್ವನಾಥ ಮಿತ್ತೂರು ಸ್ವರಚಿತ ಪರಿಸರ ಸಂಬಂಧಿತ ಕವನ ವಾಚಿಸಿದರು.
ಪ್ರೌಢ ಶಾಲಾ ವಿದ್ಯಾರ್ಥಿಗಳ ಕವಿಗೋಷ್ಠಿಯು ಕವಯಿತ್ರಿ ಶಿಕ್ಷಕಿ ಸೀತಾಲಕ್ಷ್ಮೀ ವರ್ಮ ವಿಟ್ಲ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ವೈಷ್ಣವಿ ಕಡ್ಯ ಕಾರ್ಯಕ್ರಮ ನಿರೂಪಿಸಿದರು.
ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಸಿದ್ಧ ಕವಿಗಳ ಪರಿಸರ ಗೀತೆಗಳನ್ನು ಹಾಡಿದರು.
ವೇದಕೆಯಲ್ಲಿ ಶ್ರೀರಾಮ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಸಂತ ಬಲ್ಲಾಳ್ ,ಮುಖ್ಯ ಶಿಕ್ಷಕ ಗೋಪಾಲ, ಹಿರಿಯ ಸಾಹಿತಿ ಗಣರಾಜ ಕುಂಬ್ಳೆ,ಉದ್ಯಮಿ ನಾಗೇಶ ಕಲ್ಲಡ್ಕ ಉಪಸ್ಥಿತರಿದ್ದರು. ಕವಯಿತ್ರಿ ಮಧುರ ಕಡ್ಯ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು