6:44 AM Friday27 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಬಹುಭಾಷಾ ಕವಿಗೋಷ್ಠಿ; ಪ್ರಕೃತಿಯ ವಿಸ್ಮಯಗಳು ಕವನ ರಚನೆಗೆ ಪ್ರೇರಕ ಎಂದ ಸಾಹಿತಿ ಪ್ರೊ. ರಾಜಮಣಿ ರಾಮಕುಂಜ

20/06/2024, 18:48

ಬಂಟ್ವಾಳ(reporterkarnataka.com): ಪ್ರಕೃತಿಯ ವಿಚಾರಗಳಿಂದ ನಾವು ವಿಸ್ಮಿತರಾಗುತ್ತೇವೆ. ವಿಸ್ಮಯಗಳು ಪ್ರಚೋದಿಸಿ ಹೃದಯದ ಭಾಷೆಯಾಗಿ ಕವನ ರೂಪದಲ್ಲಿ ಹೊರಹೊಮ್ಮುತ್ತದೆ. ಕವನ ಬುದ್ದಿಯ ಭಾಷೆ ಅಲ್ಲ, ಅದು ಹೃದಯದ ಭಾಷೆ . ಕವನವನ್ನು ಓದಿದಾಗ , ಹಾಡಿದಾಗ ಪ್ರಭಾವಿಸುತ್ತದೆ ಎಂದು ಸಾಹಿತಿ ಪ್ರೊ. ರಾಜಮಣಿ ರಾಮಕುಂಜ ಹೇಳಿದರು.


ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಸಹಯೋಗದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪದವಿ ಮತ್ತು ಪಿಯುಸಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಪರಿಸರ ಸಂಬಂಧಿತ ಸ್ವರಚಿತ ಕವಿತೆಗಳನ್ನು ವಾಚನ ಮಾಡಿದರು. ವೈಷ್ಣವಿ ಕಲ್ಲಡ್ಕ ನಿರೂಪಿಸಿದರು.
ಹಿರಿಯ ಪತ್ರಕರ್ತ ಜಯಾನಂದ ಪೆರಾಜೆಯವರ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ಜರಗಿತು. ಕವಯಿತ್ರಿ ಅಪೂರ್ವ ಕಾರಂತ್ ಪುತ್ತೂರು ನಿರೂಪಿಸಿದರು.
ಕವಿಗಳಾದ ಡಾ. ಸುರೇಶ ನೆಗಳಗುಳಿ, ರೆಮಂಡ್ ಡಿಕುನ್ಹಾ ತಾಕೊಡೆ, ಪಂಕಜಾ ಮುಡಿಪು , ಶಾಂತಾ ಪುತ್ತೂರು, ಜಯಶ್ರೀ ಶೆಣೈ ಬಂಟ್ವಾಳ , ಸೋನಿತಾ ನೇರಳಕಟ್ಟೆ , ಜಯರಾಮ ಪಡ್ರೆ, ಹೇಮಾವತಿ ಸಾಲೆತ್ತೂರು, ಋತ್ವಿಕ್ ಮೊಳೆಯಾರ, ವಿಶ್ವನಾಥ ಮಿತ್ತೂರು ಸ್ವರಚಿತ ಪರಿಸರ ಸಂಬಂಧಿತ ಕವನ ವಾಚಿಸಿದರು.
ಪ್ರೌಢ ಶಾಲಾ ವಿದ್ಯಾರ್ಥಿಗಳ ಕವಿಗೋಷ್ಠಿಯು ಕವಯಿತ್ರಿ ಶಿಕ್ಷಕಿ ಸೀತಾಲಕ್ಷ್ಮೀ ವರ್ಮ ವಿಟ್ಲ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ವೈಷ್ಣವಿ ಕಡ್ಯ ಕಾರ್ಯಕ್ರಮ ನಿರೂಪಿಸಿದರು.
ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಸಿದ್ಧ ಕವಿಗಳ ಪರಿಸರ ಗೀತೆಗಳನ್ನು ಹಾಡಿದರು.
ವೇದಕೆಯಲ್ಲಿ ಶ್ರೀರಾಮ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಸಂತ ಬಲ್ಲಾಳ್ ,ಮುಖ್ಯ ಶಿಕ್ಷಕ ಗೋಪಾಲ, ಹಿರಿಯ ಸಾಹಿತಿ ಗಣರಾಜ ಕುಂಬ್ಳೆ,ಉದ್ಯಮಿ ನಾಗೇಶ ಕಲ್ಲಡ್ಕ ಉಪಸ್ಥಿತರಿದ್ದರು. ಕವಯಿತ್ರಿ ಮಧುರ ಕಡ್ಯ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು