4:17 AM Monday2 - February 2026
ಬ್ರೇಕಿಂಗ್ ನ್ಯೂಸ್
ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ

ಇತ್ತೀಚಿನ ಸುದ್ದಿ

ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಬಹುಭಾಷಾ ಕವಿಗೋಷ್ಠಿ; ಪ್ರಕೃತಿಯ ವಿಸ್ಮಯಗಳು ಕವನ ರಚನೆಗೆ ಪ್ರೇರಕ ಎಂದ ಸಾಹಿತಿ ಪ್ರೊ. ರಾಜಮಣಿ ರಾಮಕುಂಜ

20/06/2024, 18:48

ಬಂಟ್ವಾಳ(reporterkarnataka.com): ಪ್ರಕೃತಿಯ ವಿಚಾರಗಳಿಂದ ನಾವು ವಿಸ್ಮಿತರಾಗುತ್ತೇವೆ. ವಿಸ್ಮಯಗಳು ಪ್ರಚೋದಿಸಿ ಹೃದಯದ ಭಾಷೆಯಾಗಿ ಕವನ ರೂಪದಲ್ಲಿ ಹೊರಹೊಮ್ಮುತ್ತದೆ. ಕವನ ಬುದ್ದಿಯ ಭಾಷೆ ಅಲ್ಲ, ಅದು ಹೃದಯದ ಭಾಷೆ . ಕವನವನ್ನು ಓದಿದಾಗ , ಹಾಡಿದಾಗ ಪ್ರಭಾವಿಸುತ್ತದೆ ಎಂದು ಸಾಹಿತಿ ಪ್ರೊ. ರಾಜಮಣಿ ರಾಮಕುಂಜ ಹೇಳಿದರು.


ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಸಹಯೋಗದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪದವಿ ಮತ್ತು ಪಿಯುಸಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಪರಿಸರ ಸಂಬಂಧಿತ ಸ್ವರಚಿತ ಕವಿತೆಗಳನ್ನು ವಾಚನ ಮಾಡಿದರು. ವೈಷ್ಣವಿ ಕಲ್ಲಡ್ಕ ನಿರೂಪಿಸಿದರು.
ಹಿರಿಯ ಪತ್ರಕರ್ತ ಜಯಾನಂದ ಪೆರಾಜೆಯವರ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ಜರಗಿತು. ಕವಯಿತ್ರಿ ಅಪೂರ್ವ ಕಾರಂತ್ ಪುತ್ತೂರು ನಿರೂಪಿಸಿದರು.
ಕವಿಗಳಾದ ಡಾ. ಸುರೇಶ ನೆಗಳಗುಳಿ, ರೆಮಂಡ್ ಡಿಕುನ್ಹಾ ತಾಕೊಡೆ, ಪಂಕಜಾ ಮುಡಿಪು , ಶಾಂತಾ ಪುತ್ತೂರು, ಜಯಶ್ರೀ ಶೆಣೈ ಬಂಟ್ವಾಳ , ಸೋನಿತಾ ನೇರಳಕಟ್ಟೆ , ಜಯರಾಮ ಪಡ್ರೆ, ಹೇಮಾವತಿ ಸಾಲೆತ್ತೂರು, ಋತ್ವಿಕ್ ಮೊಳೆಯಾರ, ವಿಶ್ವನಾಥ ಮಿತ್ತೂರು ಸ್ವರಚಿತ ಪರಿಸರ ಸಂಬಂಧಿತ ಕವನ ವಾಚಿಸಿದರು.
ಪ್ರೌಢ ಶಾಲಾ ವಿದ್ಯಾರ್ಥಿಗಳ ಕವಿಗೋಷ್ಠಿಯು ಕವಯಿತ್ರಿ ಶಿಕ್ಷಕಿ ಸೀತಾಲಕ್ಷ್ಮೀ ವರ್ಮ ವಿಟ್ಲ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ವೈಷ್ಣವಿ ಕಡ್ಯ ಕಾರ್ಯಕ್ರಮ ನಿರೂಪಿಸಿದರು.
ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಸಿದ್ಧ ಕವಿಗಳ ಪರಿಸರ ಗೀತೆಗಳನ್ನು ಹಾಡಿದರು.
ವೇದಕೆಯಲ್ಲಿ ಶ್ರೀರಾಮ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಸಂತ ಬಲ್ಲಾಳ್ ,ಮುಖ್ಯ ಶಿಕ್ಷಕ ಗೋಪಾಲ, ಹಿರಿಯ ಸಾಹಿತಿ ಗಣರಾಜ ಕುಂಬ್ಳೆ,ಉದ್ಯಮಿ ನಾಗೇಶ ಕಲ್ಲಡ್ಕ ಉಪಸ್ಥಿತರಿದ್ದರು. ಕವಯಿತ್ರಿ ಮಧುರ ಕಡ್ಯ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು