11:03 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಬಹುಭಾಷಾ ಕವಿಗೋಷ್ಠಿ; ಪ್ರಕೃತಿಯ ವಿಸ್ಮಯಗಳು ಕವನ ರಚನೆಗೆ ಪ್ರೇರಕ ಎಂದ ಸಾಹಿತಿ ಪ್ರೊ. ರಾಜಮಣಿ ರಾಮಕುಂಜ

20/06/2024, 18:48

ಬಂಟ್ವಾಳ(reporterkarnataka.com): ಪ್ರಕೃತಿಯ ವಿಚಾರಗಳಿಂದ ನಾವು ವಿಸ್ಮಿತರಾಗುತ್ತೇವೆ. ವಿಸ್ಮಯಗಳು ಪ್ರಚೋದಿಸಿ ಹೃದಯದ ಭಾಷೆಯಾಗಿ ಕವನ ರೂಪದಲ್ಲಿ ಹೊರಹೊಮ್ಮುತ್ತದೆ. ಕವನ ಬುದ್ದಿಯ ಭಾಷೆ ಅಲ್ಲ, ಅದು ಹೃದಯದ ಭಾಷೆ . ಕವನವನ್ನು ಓದಿದಾಗ , ಹಾಡಿದಾಗ ಪ್ರಭಾವಿಸುತ್ತದೆ ಎಂದು ಸಾಹಿತಿ ಪ್ರೊ. ರಾಜಮಣಿ ರಾಮಕುಂಜ ಹೇಳಿದರು.


ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಸಹಯೋಗದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪದವಿ ಮತ್ತು ಪಿಯುಸಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಪರಿಸರ ಸಂಬಂಧಿತ ಸ್ವರಚಿತ ಕವಿತೆಗಳನ್ನು ವಾಚನ ಮಾಡಿದರು. ವೈಷ್ಣವಿ ಕಲ್ಲಡ್ಕ ನಿರೂಪಿಸಿದರು.
ಹಿರಿಯ ಪತ್ರಕರ್ತ ಜಯಾನಂದ ಪೆರಾಜೆಯವರ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ಜರಗಿತು. ಕವಯಿತ್ರಿ ಅಪೂರ್ವ ಕಾರಂತ್ ಪುತ್ತೂರು ನಿರೂಪಿಸಿದರು.
ಕವಿಗಳಾದ ಡಾ. ಸುರೇಶ ನೆಗಳಗುಳಿ, ರೆಮಂಡ್ ಡಿಕುನ್ಹಾ ತಾಕೊಡೆ, ಪಂಕಜಾ ಮುಡಿಪು , ಶಾಂತಾ ಪುತ್ತೂರು, ಜಯಶ್ರೀ ಶೆಣೈ ಬಂಟ್ವಾಳ , ಸೋನಿತಾ ನೇರಳಕಟ್ಟೆ , ಜಯರಾಮ ಪಡ್ರೆ, ಹೇಮಾವತಿ ಸಾಲೆತ್ತೂರು, ಋತ್ವಿಕ್ ಮೊಳೆಯಾರ, ವಿಶ್ವನಾಥ ಮಿತ್ತೂರು ಸ್ವರಚಿತ ಪರಿಸರ ಸಂಬಂಧಿತ ಕವನ ವಾಚಿಸಿದರು.
ಪ್ರೌಢ ಶಾಲಾ ವಿದ್ಯಾರ್ಥಿಗಳ ಕವಿಗೋಷ್ಠಿಯು ಕವಯಿತ್ರಿ ಶಿಕ್ಷಕಿ ಸೀತಾಲಕ್ಷ್ಮೀ ವರ್ಮ ವಿಟ್ಲ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ವೈಷ್ಣವಿ ಕಡ್ಯ ಕಾರ್ಯಕ್ರಮ ನಿರೂಪಿಸಿದರು.
ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಸಿದ್ಧ ಕವಿಗಳ ಪರಿಸರ ಗೀತೆಗಳನ್ನು ಹಾಡಿದರು.
ವೇದಕೆಯಲ್ಲಿ ಶ್ರೀರಾಮ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಸಂತ ಬಲ್ಲಾಳ್ ,ಮುಖ್ಯ ಶಿಕ್ಷಕ ಗೋಪಾಲ, ಹಿರಿಯ ಸಾಹಿತಿ ಗಣರಾಜ ಕುಂಬ್ಳೆ,ಉದ್ಯಮಿ ನಾಗೇಶ ಕಲ್ಲಡ್ಕ ಉಪಸ್ಥಿತರಿದ್ದರು. ಕವಯಿತ್ರಿ ಮಧುರ ಕಡ್ಯ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು