4:06 AM Monday21 - October 2024
ಬ್ರೇಕಿಂಗ್ ನ್ಯೂಸ್
ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ…

ಇತ್ತೀಚಿನ ಸುದ್ದಿ

ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಬಹುಭಾಷಾ ಕವಿಗೋಷ್ಠಿ; ಪ್ರಕೃತಿಯ ವಿಸ್ಮಯಗಳು ಕವನ ರಚನೆಗೆ ಪ್ರೇರಕ ಎಂದ ಸಾಹಿತಿ ಪ್ರೊ. ರಾಜಮಣಿ ರಾಮಕುಂಜ

20/06/2024, 18:48

ಬಂಟ್ವಾಳ(reporterkarnataka.com): ಪ್ರಕೃತಿಯ ವಿಚಾರಗಳಿಂದ ನಾವು ವಿಸ್ಮಿತರಾಗುತ್ತೇವೆ. ವಿಸ್ಮಯಗಳು ಪ್ರಚೋದಿಸಿ ಹೃದಯದ ಭಾಷೆಯಾಗಿ ಕವನ ರೂಪದಲ್ಲಿ ಹೊರಹೊಮ್ಮುತ್ತದೆ. ಕವನ ಬುದ್ದಿಯ ಭಾಷೆ ಅಲ್ಲ, ಅದು ಹೃದಯದ ಭಾಷೆ . ಕವನವನ್ನು ಓದಿದಾಗ , ಹಾಡಿದಾಗ ಪ್ರಭಾವಿಸುತ್ತದೆ ಎಂದು ಸಾಹಿತಿ ಪ್ರೊ. ರಾಜಮಣಿ ರಾಮಕುಂಜ ಹೇಳಿದರು.


ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಸಹಯೋಗದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪದವಿ ಮತ್ತು ಪಿಯುಸಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಪರಿಸರ ಸಂಬಂಧಿತ ಸ್ವರಚಿತ ಕವಿತೆಗಳನ್ನು ವಾಚನ ಮಾಡಿದರು. ವೈಷ್ಣವಿ ಕಲ್ಲಡ್ಕ ನಿರೂಪಿಸಿದರು.
ಹಿರಿಯ ಪತ್ರಕರ್ತ ಜಯಾನಂದ ಪೆರಾಜೆಯವರ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ಜರಗಿತು. ಕವಯಿತ್ರಿ ಅಪೂರ್ವ ಕಾರಂತ್ ಪುತ್ತೂರು ನಿರೂಪಿಸಿದರು.
ಕವಿಗಳಾದ ಡಾ. ಸುರೇಶ ನೆಗಳಗುಳಿ, ರೆಮಂಡ್ ಡಿಕುನ್ಹಾ ತಾಕೊಡೆ, ಪಂಕಜಾ ಮುಡಿಪು , ಶಾಂತಾ ಪುತ್ತೂರು, ಜಯಶ್ರೀ ಶೆಣೈ ಬಂಟ್ವಾಳ , ಸೋನಿತಾ ನೇರಳಕಟ್ಟೆ , ಜಯರಾಮ ಪಡ್ರೆ, ಹೇಮಾವತಿ ಸಾಲೆತ್ತೂರು, ಋತ್ವಿಕ್ ಮೊಳೆಯಾರ, ವಿಶ್ವನಾಥ ಮಿತ್ತೂರು ಸ್ವರಚಿತ ಪರಿಸರ ಸಂಬಂಧಿತ ಕವನ ವಾಚಿಸಿದರು.
ಪ್ರೌಢ ಶಾಲಾ ವಿದ್ಯಾರ್ಥಿಗಳ ಕವಿಗೋಷ್ಠಿಯು ಕವಯಿತ್ರಿ ಶಿಕ್ಷಕಿ ಸೀತಾಲಕ್ಷ್ಮೀ ವರ್ಮ ವಿಟ್ಲ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ವೈಷ್ಣವಿ ಕಡ್ಯ ಕಾರ್ಯಕ್ರಮ ನಿರೂಪಿಸಿದರು.
ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಸಿದ್ಧ ಕವಿಗಳ ಪರಿಸರ ಗೀತೆಗಳನ್ನು ಹಾಡಿದರು.
ವೇದಕೆಯಲ್ಲಿ ಶ್ರೀರಾಮ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಸಂತ ಬಲ್ಲಾಳ್ ,ಮುಖ್ಯ ಶಿಕ್ಷಕ ಗೋಪಾಲ, ಹಿರಿಯ ಸಾಹಿತಿ ಗಣರಾಜ ಕುಂಬ್ಳೆ,ಉದ್ಯಮಿ ನಾಗೇಶ ಕಲ್ಲಡ್ಕ ಉಪಸ್ಥಿತರಿದ್ದರು. ಕವಯಿತ್ರಿ ಮಧುರ ಕಡ್ಯ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು