5:47 AM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಬಹುಭಾಷಾ ಕವಿಗೋಷ್ಠಿ; ಪ್ರಕೃತಿಯ ವಿಸ್ಮಯಗಳು ಕವನ ರಚನೆಗೆ ಪ್ರೇರಕ ಎಂದ ಸಾಹಿತಿ ಪ್ರೊ. ರಾಜಮಣಿ ರಾಮಕುಂಜ

20/06/2024, 18:48

ಬಂಟ್ವಾಳ(reporterkarnataka.com): ಪ್ರಕೃತಿಯ ವಿಚಾರಗಳಿಂದ ನಾವು ವಿಸ್ಮಿತರಾಗುತ್ತೇವೆ. ವಿಸ್ಮಯಗಳು ಪ್ರಚೋದಿಸಿ ಹೃದಯದ ಭಾಷೆಯಾಗಿ ಕವನ ರೂಪದಲ್ಲಿ ಹೊರಹೊಮ್ಮುತ್ತದೆ. ಕವನ ಬುದ್ದಿಯ ಭಾಷೆ ಅಲ್ಲ, ಅದು ಹೃದಯದ ಭಾಷೆ . ಕವನವನ್ನು ಓದಿದಾಗ , ಹಾಡಿದಾಗ ಪ್ರಭಾವಿಸುತ್ತದೆ ಎಂದು ಸಾಹಿತಿ ಪ್ರೊ. ರಾಜಮಣಿ ರಾಮಕುಂಜ ಹೇಳಿದರು.


ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಸಹಯೋಗದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪದವಿ ಮತ್ತು ಪಿಯುಸಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಪರಿಸರ ಸಂಬಂಧಿತ ಸ್ವರಚಿತ ಕವಿತೆಗಳನ್ನು ವಾಚನ ಮಾಡಿದರು. ವೈಷ್ಣವಿ ಕಲ್ಲಡ್ಕ ನಿರೂಪಿಸಿದರು.
ಹಿರಿಯ ಪತ್ರಕರ್ತ ಜಯಾನಂದ ಪೆರಾಜೆಯವರ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ಜರಗಿತು. ಕವಯಿತ್ರಿ ಅಪೂರ್ವ ಕಾರಂತ್ ಪುತ್ತೂರು ನಿರೂಪಿಸಿದರು.
ಕವಿಗಳಾದ ಡಾ. ಸುರೇಶ ನೆಗಳಗುಳಿ, ರೆಮಂಡ್ ಡಿಕುನ್ಹಾ ತಾಕೊಡೆ, ಪಂಕಜಾ ಮುಡಿಪು , ಶಾಂತಾ ಪುತ್ತೂರು, ಜಯಶ್ರೀ ಶೆಣೈ ಬಂಟ್ವಾಳ , ಸೋನಿತಾ ನೇರಳಕಟ್ಟೆ , ಜಯರಾಮ ಪಡ್ರೆ, ಹೇಮಾವತಿ ಸಾಲೆತ್ತೂರು, ಋತ್ವಿಕ್ ಮೊಳೆಯಾರ, ವಿಶ್ವನಾಥ ಮಿತ್ತೂರು ಸ್ವರಚಿತ ಪರಿಸರ ಸಂಬಂಧಿತ ಕವನ ವಾಚಿಸಿದರು.
ಪ್ರೌಢ ಶಾಲಾ ವಿದ್ಯಾರ್ಥಿಗಳ ಕವಿಗೋಷ್ಠಿಯು ಕವಯಿತ್ರಿ ಶಿಕ್ಷಕಿ ಸೀತಾಲಕ್ಷ್ಮೀ ವರ್ಮ ವಿಟ್ಲ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ವೈಷ್ಣವಿ ಕಡ್ಯ ಕಾರ್ಯಕ್ರಮ ನಿರೂಪಿಸಿದರು.
ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಸಿದ್ಧ ಕವಿಗಳ ಪರಿಸರ ಗೀತೆಗಳನ್ನು ಹಾಡಿದರು.
ವೇದಕೆಯಲ್ಲಿ ಶ್ರೀರಾಮ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಸಂತ ಬಲ್ಲಾಳ್ ,ಮುಖ್ಯ ಶಿಕ್ಷಕ ಗೋಪಾಲ, ಹಿರಿಯ ಸಾಹಿತಿ ಗಣರಾಜ ಕುಂಬ್ಳೆ,ಉದ್ಯಮಿ ನಾಗೇಶ ಕಲ್ಲಡ್ಕ ಉಪಸ್ಥಿತರಿದ್ದರು. ಕವಯಿತ್ರಿ ಮಧುರ ಕಡ್ಯ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು