8:22 PM Monday20 - January 2025
ಬ್ರೇಕಿಂಗ್ ನ್ಯೂಸ್
ಮಹಾತ್ಮ ಗಾಂಧಿ ರಿಯಲ್ ಗಾಂಧಿ, ಸೋನಿಯಾ, ರಾಹುಲ್, ಪ್ರಿಯಾಂಕ ಅವರು ನಕಲಿ ಗಾಂಧಿಗಳು:… ಬೆಂಗಳೂರು ಐಟಿ ಹಬ್, ವ್ಯೂಹಾತ್ಮಕ ನಗರ; ಇಲ್ಲೇ ಐಕ್ಯಾಟ್ ಕೇಂದ್ರ ಖಚಿತ: ಕೇಂದ್ರ… ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ 5ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಜನವಾದಿ ಮಹಿಳಾ… ಮಂಗಳೂರಿನ ಜನತೆಗೆ ಕಲುಷಿತ ನೀರು ಪೂರೈಕೆ: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ… ಭಾರತಿ ಏರ್‌ಟೆಲ್ ಮತ್ತು ಬಜಾಜ್ ಫೈನಾನ್ಸ್ ನಿಂದ ಹಣಕಾಸಿನ ಸೇವೆಗಳಿಗಾಗಿ ಅತಿದೊಡ್ಡ ಡಿಜಿಟಲ್… ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರ ಸಮ್ಮತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ… ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ… ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ

ಇತ್ತೀಚಿನ ಸುದ್ದಿ

ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಬಹುಭಾಷಾ ಕವಿಗೋಷ್ಠಿ; ಪ್ರಕೃತಿಯ ವಿಸ್ಮಯಗಳು ಕವನ ರಚನೆಗೆ ಪ್ರೇರಕ ಎಂದ ಸಾಹಿತಿ ಪ್ರೊ. ರಾಜಮಣಿ ರಾಮಕುಂಜ

20/06/2024, 18:48

ಬಂಟ್ವಾಳ(reporterkarnataka.com): ಪ್ರಕೃತಿಯ ವಿಚಾರಗಳಿಂದ ನಾವು ವಿಸ್ಮಿತರಾಗುತ್ತೇವೆ. ವಿಸ್ಮಯಗಳು ಪ್ರಚೋದಿಸಿ ಹೃದಯದ ಭಾಷೆಯಾಗಿ ಕವನ ರೂಪದಲ್ಲಿ ಹೊರಹೊಮ್ಮುತ್ತದೆ. ಕವನ ಬುದ್ದಿಯ ಭಾಷೆ ಅಲ್ಲ, ಅದು ಹೃದಯದ ಭಾಷೆ . ಕವನವನ್ನು ಓದಿದಾಗ , ಹಾಡಿದಾಗ ಪ್ರಭಾವಿಸುತ್ತದೆ ಎಂದು ಸಾಹಿತಿ ಪ್ರೊ. ರಾಜಮಣಿ ರಾಮಕುಂಜ ಹೇಳಿದರು.


ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಸಹಯೋಗದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪದವಿ ಮತ್ತು ಪಿಯುಸಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಪರಿಸರ ಸಂಬಂಧಿತ ಸ್ವರಚಿತ ಕವಿತೆಗಳನ್ನು ವಾಚನ ಮಾಡಿದರು. ವೈಷ್ಣವಿ ಕಲ್ಲಡ್ಕ ನಿರೂಪಿಸಿದರು.
ಹಿರಿಯ ಪತ್ರಕರ್ತ ಜಯಾನಂದ ಪೆರಾಜೆಯವರ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ಜರಗಿತು. ಕವಯಿತ್ರಿ ಅಪೂರ್ವ ಕಾರಂತ್ ಪುತ್ತೂರು ನಿರೂಪಿಸಿದರು.
ಕವಿಗಳಾದ ಡಾ. ಸುರೇಶ ನೆಗಳಗುಳಿ, ರೆಮಂಡ್ ಡಿಕುನ್ಹಾ ತಾಕೊಡೆ, ಪಂಕಜಾ ಮುಡಿಪು , ಶಾಂತಾ ಪುತ್ತೂರು, ಜಯಶ್ರೀ ಶೆಣೈ ಬಂಟ್ವಾಳ , ಸೋನಿತಾ ನೇರಳಕಟ್ಟೆ , ಜಯರಾಮ ಪಡ್ರೆ, ಹೇಮಾವತಿ ಸಾಲೆತ್ತೂರು, ಋತ್ವಿಕ್ ಮೊಳೆಯಾರ, ವಿಶ್ವನಾಥ ಮಿತ್ತೂರು ಸ್ವರಚಿತ ಪರಿಸರ ಸಂಬಂಧಿತ ಕವನ ವಾಚಿಸಿದರು.
ಪ್ರೌಢ ಶಾಲಾ ವಿದ್ಯಾರ್ಥಿಗಳ ಕವಿಗೋಷ್ಠಿಯು ಕವಯಿತ್ರಿ ಶಿಕ್ಷಕಿ ಸೀತಾಲಕ್ಷ್ಮೀ ವರ್ಮ ವಿಟ್ಲ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ವೈಷ್ಣವಿ ಕಡ್ಯ ಕಾರ್ಯಕ್ರಮ ನಿರೂಪಿಸಿದರು.
ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಸಿದ್ಧ ಕವಿಗಳ ಪರಿಸರ ಗೀತೆಗಳನ್ನು ಹಾಡಿದರು.
ವೇದಕೆಯಲ್ಲಿ ಶ್ರೀರಾಮ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಸಂತ ಬಲ್ಲಾಳ್ ,ಮುಖ್ಯ ಶಿಕ್ಷಕ ಗೋಪಾಲ, ಹಿರಿಯ ಸಾಹಿತಿ ಗಣರಾಜ ಕುಂಬ್ಳೆ,ಉದ್ಯಮಿ ನಾಗೇಶ ಕಲ್ಲಡ್ಕ ಉಪಸ್ಥಿತರಿದ್ದರು. ಕವಯಿತ್ರಿ ಮಧುರ ಕಡ್ಯ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು