12:38 PM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಶೃಂಗೇರಿ ಶಾಸಕರ ವಿರುದ್ಧ ಲೋಕಾಯುಕ್ತ ದೂರು ಐದೇ ದಿನದಲ್ಲಿ ವಾಪಸ್: ದೂರುದಾರರಿಗೆ ಆಮಿಷೆ ಆರೋಪ

22/12/2022, 18:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಅವರ ವಿರುದ್ಧ ಲೋಕಾಯುಕ್ತಕ್ಕೆ ನೀಡಿದ ದೂರನ್ನು ಐದೇ ದಿನದಲ್ಲಿ ದೂರುದಾರ ವಾಪಸ್ ಪಡೆದಿರುವುದು ಹಲವು ಸಂಶಯಗಳಿಗೆ ಎಡೆಮಾಡಿ ಕೊಟ್ಟಿದೆ. ದೂರುದಾರರಿಗೆ ಆಮಿಷೆಯೊಡ್ಡಿ ದೂರು ವಾಪಸ್ ಪಡೆಯಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ನವೆಂಬರ್ 18ರಂದು ಶೃಂಗೇರಿಯ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮೇಲೆ ಲೋಕಾಯುಕ್ತ ದೂರು ನೀಡಲಾಗಿತ್ತು. ಶಾಸಕರಿಗೆ
ಅಕ್ರಮ ತೋಟ ಖರೀದಿಗೆ 100 ಕೋಟಿಗೂ ಅಧಿಕ ಹಣ ಎಲ್ಲಿಂದ ಬಂತು ಅಂತ ದೂರುದಾರರು ಪ್ರಶ್ನಿಸಿದ್ದರು. ಆದರೆ ಇದೀಗ ದೂರು ನೀಡಿದ ಐದೇ ದಿನಕ್ಕೆ ಕೇಸನ್ನು ದೂರುದಾರ ವಿಜಯಾನಂದ ಅವರು ವಾಪಸ್ ಪಡೆದಿದ್ದಾರೆ. ಇದೀಗ ದೂರು ಹಿಂಪಡೆದ ಪ್ರಕರಣ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆಯುತ್ತಿದೆ.


ಶಾಸಕರ ಸಂಬಂಧಿ ಪಿಎ ಅವರು ವಿಜಯಾನಂದ ಹೆಸರಲ್ಲಿ ಛಾಪಾ ಕಾಗದ ಪಡೆದಿದ್ದಾರೆ ಎನ್ನಲಾಗಿದೆ. ಶಾಸಕರ ಸಂಬಂಧಿ ಪಿಎ ಛಾಪ ಕಾಗದ ತೆಗೆದಿರುವ ವಿಷಯ ವೈರಲ್ ಆಗುತ್ತಿದೆ.

ಛಾಪಾ ಕಾಗದದ ಪೇಪರ್ ನಲ್ಲಿ ವಿಜಯಾನಂದರ ಹೆಸರಿದ್ದರೆ,
ಫೋನ್ ನಂಬರ್ ಪಿಎ ಅವರದ್ದಾಗಿದೆ ಎಂಬ ಮಾಹಿತಿ ಇದೆ. ಬೆಂಗಳೂರು ಲೋಕಾಯುಕ್ತದಲ್ಲಿ ದಾಖಲಾಗಿದ್ದ ಕೇಸ್ ಹಿಂಪಡೆಯಲು ಅಫಿಡವಿಟ್ ಮಾಡಲಾಗಿದೆ. ಕೇಸ್ ಪಡೆಯಲು ಶಾಸಕ ಟಿ.ಡಿ. ರಾಜೇಗೌಡ ಆಪ್ತರಿಂದಲೇ ಷಡ್ಯಂತ್ರ ನಡೆದಿದೆ
ಎಂದು ಬಿಜೆಪಿ ಆರೋಪಿಸಿದೆ.

ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಪ್ರಕರಣ ರಾಜಕೀಯವಾಗಿಯೂ ಪ್ರಾಮುಖ್ಯತೆಯನ್ನು ಪಡೆಯುತ್ತಿದೆ. ವಿಜಯಾನಂದ ಕೇಸ್ ಹಿಂಪಡೆದ ಮೇಲೆ ಚಿಕ್ಕಮಗಳೂರಲ್ಲಿ ಲೋಕಾಯುಕ್ತದಲ್ಲಿ 2ನೇ ದೂರು ದಾಖಲಾಗಿದೆ. ಕಾಫಿ ಡೇ ಸಂಸ್ಥಾಪಕ ದಿ. ಸಿದ್ದಾರ್ಥ ಹೆಗ್ಡೆ ಅವರ ಟ್ರಸ್ಟ್ ನ ತೋಟ ಖರೀದಿಯಲ್ಲಿ ಅಕ್ರಮದ ಆರೋಪ ದೂರಿನ ಪ್ರಕರಣ ಇದಾಗಿದೆ.

ಟಿ.ಡಿ.ರಾಜೇಗೌಡ ಚಿಕ್ಕಮಗಳೂರು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ

ಇತ್ತೀಚಿನ ಸುದ್ದಿ

ಜಾಹೀರಾತು