10:15 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಶೃಂಗೇರಿ ಶಾಸಕರ ವಿರುದ್ಧ ಲೋಕಾಯುಕ್ತ ದೂರು ಐದೇ ದಿನದಲ್ಲಿ ವಾಪಸ್: ದೂರುದಾರರಿಗೆ ಆಮಿಷೆ ಆರೋಪ

22/12/2022, 18:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಅವರ ವಿರುದ್ಧ ಲೋಕಾಯುಕ್ತಕ್ಕೆ ನೀಡಿದ ದೂರನ್ನು ಐದೇ ದಿನದಲ್ಲಿ ದೂರುದಾರ ವಾಪಸ್ ಪಡೆದಿರುವುದು ಹಲವು ಸಂಶಯಗಳಿಗೆ ಎಡೆಮಾಡಿ ಕೊಟ್ಟಿದೆ. ದೂರುದಾರರಿಗೆ ಆಮಿಷೆಯೊಡ್ಡಿ ದೂರು ವಾಪಸ್ ಪಡೆಯಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ನವೆಂಬರ್ 18ರಂದು ಶೃಂಗೇರಿಯ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮೇಲೆ ಲೋಕಾಯುಕ್ತ ದೂರು ನೀಡಲಾಗಿತ್ತು. ಶಾಸಕರಿಗೆ
ಅಕ್ರಮ ತೋಟ ಖರೀದಿಗೆ 100 ಕೋಟಿಗೂ ಅಧಿಕ ಹಣ ಎಲ್ಲಿಂದ ಬಂತು ಅಂತ ದೂರುದಾರರು ಪ್ರಶ್ನಿಸಿದ್ದರು. ಆದರೆ ಇದೀಗ ದೂರು ನೀಡಿದ ಐದೇ ದಿನಕ್ಕೆ ಕೇಸನ್ನು ದೂರುದಾರ ವಿಜಯಾನಂದ ಅವರು ವಾಪಸ್ ಪಡೆದಿದ್ದಾರೆ. ಇದೀಗ ದೂರು ಹಿಂಪಡೆದ ಪ್ರಕರಣ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆಯುತ್ತಿದೆ.


ಶಾಸಕರ ಸಂಬಂಧಿ ಪಿಎ ಅವರು ವಿಜಯಾನಂದ ಹೆಸರಲ್ಲಿ ಛಾಪಾ ಕಾಗದ ಪಡೆದಿದ್ದಾರೆ ಎನ್ನಲಾಗಿದೆ. ಶಾಸಕರ ಸಂಬಂಧಿ ಪಿಎ ಛಾಪ ಕಾಗದ ತೆಗೆದಿರುವ ವಿಷಯ ವೈರಲ್ ಆಗುತ್ತಿದೆ.

ಛಾಪಾ ಕಾಗದದ ಪೇಪರ್ ನಲ್ಲಿ ವಿಜಯಾನಂದರ ಹೆಸರಿದ್ದರೆ,
ಫೋನ್ ನಂಬರ್ ಪಿಎ ಅವರದ್ದಾಗಿದೆ ಎಂಬ ಮಾಹಿತಿ ಇದೆ. ಬೆಂಗಳೂರು ಲೋಕಾಯುಕ್ತದಲ್ಲಿ ದಾಖಲಾಗಿದ್ದ ಕೇಸ್ ಹಿಂಪಡೆಯಲು ಅಫಿಡವಿಟ್ ಮಾಡಲಾಗಿದೆ. ಕೇಸ್ ಪಡೆಯಲು ಶಾಸಕ ಟಿ.ಡಿ. ರಾಜೇಗೌಡ ಆಪ್ತರಿಂದಲೇ ಷಡ್ಯಂತ್ರ ನಡೆದಿದೆ
ಎಂದು ಬಿಜೆಪಿ ಆರೋಪಿಸಿದೆ.

ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಪ್ರಕರಣ ರಾಜಕೀಯವಾಗಿಯೂ ಪ್ರಾಮುಖ್ಯತೆಯನ್ನು ಪಡೆಯುತ್ತಿದೆ. ವಿಜಯಾನಂದ ಕೇಸ್ ಹಿಂಪಡೆದ ಮೇಲೆ ಚಿಕ್ಕಮಗಳೂರಲ್ಲಿ ಲೋಕಾಯುಕ್ತದಲ್ಲಿ 2ನೇ ದೂರು ದಾಖಲಾಗಿದೆ. ಕಾಫಿ ಡೇ ಸಂಸ್ಥಾಪಕ ದಿ. ಸಿದ್ದಾರ್ಥ ಹೆಗ್ಡೆ ಅವರ ಟ್ರಸ್ಟ್ ನ ತೋಟ ಖರೀದಿಯಲ್ಲಿ ಅಕ್ರಮದ ಆರೋಪ ದೂರಿನ ಪ್ರಕರಣ ಇದಾಗಿದೆ.

ಟಿ.ಡಿ.ರಾಜೇಗೌಡ ಚಿಕ್ಕಮಗಳೂರು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ

ಇತ್ತೀಚಿನ ಸುದ್ದಿ

ಜಾಹೀರಾತು