1:39 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ

10/01/2025, 16:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ತಮಿಳುನಾಡಿನ ದೇಗುಲಗಳಿಗೆ ನಿನ್ನೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ(ಜ.11) ಶೃಂಗೇರಿಗೆ ಭೇಟಿ ನೀಡಲಿದ್ದಾರೆ.
ಶಿವಕುಮಾರ್ ಅವರು ಶಾರದಾಂಬೆಯ ದರ್ಶನದ ಜತೆಗೆ ಶೃಂಗೇರಿ ಮಠಕ್ಕೂ ಭೇಟಿ ನೀಡಲಿದ್ದಾರೆ. ಶೃಂಗೇರಿ ಶಾರದಾಂಬೆ ಹಾಗೂ ಗುರುಗಳ ಆಶೀರ್ವಾದ ಪಡೆಯಲಿದ್ದಾರೆ.
ಶೃಂಗೇರಿ ಮಠದಲ್ಲಿ ನಡೆಯುತ್ತಿರುವ ಸುವರ್ಣ ಮಹೋತ್ಸವದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಭಾರತೀ ತೀರ್ಥ ಮಹಾ ಜಗದ್ಗುರುಗಳು ಸನ್ಯಾಸತ್ವ ಸ್ವೀಕರಿಸಿ 50 ವರ್ಷ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಸಂಭ್ರಮ ನಡೆಯಲಿದೆ. ಮಠದಲ್ಲಿ‌ ಸ್ತೋತ್ರ, ತ್ರಿವೇಣಿಯ ಮಹಾ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ. ಏಕಕಾಲದಲ್ಲಿ 50,000 ಜನರಿಂದ ಮಂತ್ರ, ಸ್ತೋತ್ರ ಪಠಣ ನಡೆಯಲಿದೆ.
ರಾಜ್ಯ ಇಂಧನ ಸಚವ ಕೆ.ಜೆ.ಜಾರ್ಜ್ ಹಾಗೂ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕೂಡ ಭೇಟಿ ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು