9:37 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ ಸರಕಾರಿ ಆಸ್ಪತ್ರೆಗೆ ಸಿವಿಲ್ ನ್ಯಾಯಾಧೀಶರ ಭೇಟಿ; ಪರಿಶೀಲನೆ

14/12/2022, 19:19

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporter Karnataka@gmail.com

ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯಸ್ಥ ಸುನಿಲ್ ಎಸ್.ಹೊಸಮನಿ ಭೇಟಿ ನೀಡಿ ಪರಿಶೀಲಿಸಿದರು . ಆಸ್ಪತ್ರೆಯ ವಿವಿಧ ಘಟಕಗಳು ಹಾಗೂ ಒಳ ರೋಗಿಗಳ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು , ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಆಸತ್ರೆಗೆ ಬರುವ ರೋಗಿಗಳಿಗೆ ಉತ್ತಮ ಸೇವೆ ಒದಗಿಸಬೇಕು. ರೋಗಿಗಳಿಗೆ ಚೆನ್ನಾಗಿ ಶುಚಿಗೊಳಿಸಿದ ಬಟ್ಟೆಗಳನ್ನು ನೀಡಬೇಕು ಎಂದು ಹೇಳಿದರು.

ಆಸ್ಪತ್ರೆ ಶುಚಿತ್ವ , ನಿರ್ವಹಣೆ ಮತ್ತು ಸಿಬ್ಬಂದಿಯ ವೈದ್ಯಕೀಯ ಸೇವೆ ಕುರಿತು ತೃಪ್ತಿ ವ್ಯಕ್ತಪಡಿಸಿದ ಅವರು, ಆಸ್ಪತ್ರೆ ಮುಂದೆ ವಾಹನಗಳ ನಿಲುಗಡೆ ಮಾಡುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತದೆ . ಆದ್ದರಿಂದ ವಾಹನಗಳನ್ನು ವ್ಯವಸ್ಥಿತವಾಗಿ ನಿಲುಗಡೆ ಮಾಡಲು ಪೊಲೀಸ್ ಇಲಾಖೆ ನೆರವು ಪಡೆಯುಂತೆ ಸೂಚಿಸಿದರು. ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇದೆ . ಕುಡಿಯುವ ನೀರಿನ ಸಮಸ್ಯೆ ಇದೆ.

ಐಸಿಯು ಘಟಕ ಇದೆಯಾದರೂ , ತಜ್ಞ ವೈದ್ಯರಿಲ್ಲ ಎಂದು ವೈದ್ಯರು ನ್ಯಾಯಾಧೀಶರಿಗೆ ತಿಳಿಸಿದರು . ಅದಕ್ಕೆ ಸ್ಪಂದಿಸಿದ ನ್ಯಾಯಾಧೀಶರು ಸಮಸ್ಯೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು .
ಆಸ್ಪತ್ರೆ ಆಡಳಿತಾಧಿಕಾರಿ ಡಾ . ಜಿ.ಎಸ್.ಶ್ರೀನಿವಾಸ್ , ಡಾ . ಉಮಾಶಂಕರ್‌ , ಡಾ . ದಿವಾಕರ್ , ಡಾ . ಕಮಲಮ್ಮ , ಡಾ . ನಿರಂಜನ್ , ಸಿಬ್ಬಂದಿ ಪ್ರಕಾಶ್ , ಲೀಡಿಯಾ , ಔಷಧಿಕಾರ ಮೊಹಮ್ಮದ್ ಅಲಿ , ಸೈಯದ್ , ಉಷಾ , ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು