2:37 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ ಸರಕಾರಿ ಆಸ್ಪತ್ರೆಗೆ ಸಿವಿಲ್ ನ್ಯಾಯಾಧೀಶರ ಭೇಟಿ; ಪರಿಶೀಲನೆ

14/12/2022, 19:19

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporter Karnataka@gmail.com

ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯಸ್ಥ ಸುನಿಲ್ ಎಸ್.ಹೊಸಮನಿ ಭೇಟಿ ನೀಡಿ ಪರಿಶೀಲಿಸಿದರು . ಆಸ್ಪತ್ರೆಯ ವಿವಿಧ ಘಟಕಗಳು ಹಾಗೂ ಒಳ ರೋಗಿಗಳ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು , ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಆಸತ್ರೆಗೆ ಬರುವ ರೋಗಿಗಳಿಗೆ ಉತ್ತಮ ಸೇವೆ ಒದಗಿಸಬೇಕು. ರೋಗಿಗಳಿಗೆ ಚೆನ್ನಾಗಿ ಶುಚಿಗೊಳಿಸಿದ ಬಟ್ಟೆಗಳನ್ನು ನೀಡಬೇಕು ಎಂದು ಹೇಳಿದರು.

ಆಸ್ಪತ್ರೆ ಶುಚಿತ್ವ , ನಿರ್ವಹಣೆ ಮತ್ತು ಸಿಬ್ಬಂದಿಯ ವೈದ್ಯಕೀಯ ಸೇವೆ ಕುರಿತು ತೃಪ್ತಿ ವ್ಯಕ್ತಪಡಿಸಿದ ಅವರು, ಆಸ್ಪತ್ರೆ ಮುಂದೆ ವಾಹನಗಳ ನಿಲುಗಡೆ ಮಾಡುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತದೆ . ಆದ್ದರಿಂದ ವಾಹನಗಳನ್ನು ವ್ಯವಸ್ಥಿತವಾಗಿ ನಿಲುಗಡೆ ಮಾಡಲು ಪೊಲೀಸ್ ಇಲಾಖೆ ನೆರವು ಪಡೆಯುಂತೆ ಸೂಚಿಸಿದರು. ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇದೆ . ಕುಡಿಯುವ ನೀರಿನ ಸಮಸ್ಯೆ ಇದೆ.

ಐಸಿಯು ಘಟಕ ಇದೆಯಾದರೂ , ತಜ್ಞ ವೈದ್ಯರಿಲ್ಲ ಎಂದು ವೈದ್ಯರು ನ್ಯಾಯಾಧೀಶರಿಗೆ ತಿಳಿಸಿದರು . ಅದಕ್ಕೆ ಸ್ಪಂದಿಸಿದ ನ್ಯಾಯಾಧೀಶರು ಸಮಸ್ಯೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು .
ಆಸ್ಪತ್ರೆ ಆಡಳಿತಾಧಿಕಾರಿ ಡಾ . ಜಿ.ಎಸ್.ಶ್ರೀನಿವಾಸ್ , ಡಾ . ಉಮಾಶಂಕರ್‌ , ಡಾ . ದಿವಾಕರ್ , ಡಾ . ಕಮಲಮ್ಮ , ಡಾ . ನಿರಂಜನ್ , ಸಿಬ್ಬಂದಿ ಪ್ರಕಾಶ್ , ಲೀಡಿಯಾ , ಔಷಧಿಕಾರ ಮೊಹಮ್ಮದ್ ಅಲಿ , ಸೈಯದ್ , ಉಷಾ , ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು