4:44 AM Monday23 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ

07/08/2025, 19:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ರೈಲ್ವೆ ನಿಲ್ದಾಣದ ಬಳಿ ಇರುವ ರಾಂಪುರ ಹಳೆಯ ಸೇತುವೆಯ ನದಿ ತೀರದಲ್ಲಿ ನೀರು ನಾಯಿಗೆ ಬೇಟೆಯಾಡಲು ಬಳಸುವ ಬೋನುಗಳನ್ನು ಇರಿಸುತ್ತಿದ್ದ ವಿರುದ್ಧ ಸಾಮಾಜಿಕ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದ್ದಾರೆ.


ಸಾಮಾಜಿಕ ಕಾರ್ಯಕರ್ತರು ಕಾರ್ಯನಿಮಿತ ರಾಂಪುರ ಮಾರ್ಗದಿಂದ ಶ್ರೀರಂಗಪಟ್ಟಣಕ್ಕೆ ಬರುವ ಸೇತುವೆಯ ಮೇಲ್ಬಾಗದಿಂದ ಬೋನ್ ಗಳನ್ನು ಗಮನಿಸಿದ್ದಾರೆ. ಶ್ರೀರಂಗಪಟ್ಟಣ ಚಂದನ್ ನೇತ್ರತ್ವದಲ್ಲಿ ಬೋನ್ ಹಾಕುತ್ತಿರುವ ವ್ಯಕ್ತಿಯನ್ನು ವಿಚಾರಿಸಿದಾಗ ಮೀನು ಹಿಡಿಯಲು ಬೋನ್ ಹಾಕುತ್ತಿದ್ದೇವೆ ಎಂದು ಹೇಳಿದ ತಕ್ಷಣದಲ್ಲೇ ಶ್ರೀರಂಗಪಟ್ಟಣ ಹಿರಿಯ ಸ್ವಯಂ ಸೇವಕರಾದ ಲಕ್ಷ್ಮೀನಾರಾಯಣ, ಕರವೇ ತಾಲೂಕು ಅಧ್ಯಕ್ಷರಾದ ಚಂದ್ಗಾಲ್ ಶಂಕ್ರಣ್ಣ ಪೈಲ್ವಾನ್ ಸತೀಶ್ , ಗಂಜಾಂ ಮೀನುಗಾರರ ಸೊಸೈಟಿಯ ನಿರ್ದೇಶಕರಾದ ಶ್ರೀಯುತ ಗುಲ್ಕನ್ ರಾಮಣ್ಣ ಸಮ್ಮುಖದಲ್ಲಿ ಈ ಅಕ್ರಮವನ್ನು ತಕ್ಷಣದಲ್ಲಿ ಶ್ರೀರಂಗಪಟ್ಟಣ ಅರಣ್ಯ ಇಲಾಖೆಯ ಗಮನಕ್ಕೆ ತಂದರು. ಅರಣ್ಯ ಇಲಾಖೆಯ ವಾಚರ್ ಗಳಾದ ಬಸವರಾಜುರವರು ಹಾಗೂ ತುಳಸಿ ರವರು ಖುದ್ದು ಸ್ಥಳಕ್ಕೆ ಬಂದು ಬೋನ್ ಗಳನ್ನು ಸೀಜ್ ಮಾಡಿ ದೂರು ದಾಖಲಿಸುವಂತೆ ಒತ್ತಾಯಿಸಲಾಯಿತು. ಹುಲಿಯಷ್ಟೇ ಪ್ರಾಮುಖ್ಯತೆ ಉಳ್ಳ ನೀರು ನಾಯಿಗಳ ಉಳಿವು ಸಾರ್ವಜನಿಕರ ಕರ್ತವ್ಯದೊಂದಿಗೆ ಅರಣ್ಯ ಇಲಾಖೆಯ ಕರ್ತವ್ಯವು ಹೌದು ಹಾಗೂ ಈ ರೀತಿ ಮೀನುಗಾರರ ಸಂಘದವರು ಎಂದು ಹೇಳಿಕೊಂಡು ಬೋನ್ ಗಳನ್ನು ಇರಿಸುವವರಿಗೆ ಮೀನುಗಾರರ ಸಂಘದಿಂದ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿ ಪರಿಸರದ ನದಿ ತೀರದ ಜಲಚರ ಪ್ರಾಣಿಗಳನ್ನು ಉಳಿವಿಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮವಾಗಬೇಕೆಂದು ಒತ್ತಾಯಿಸಿದರು. ಶ್ರೀರಂಗಪಟ್ಟಣದ ನದಿ ತೀರದಲ್ಲಿ ರಾತ್ರಿಯ ವೇಳೆ ಅತಿ ಹೆಚ್ಚು ನೀರು ನಾಯಿ ಬೇಟೆಯಾಡುವ ಕಳ್ಳ ಬೇಟೆಗಾರರು ತಡೆಯಲು ಕ್ರಮಸೂಚಿಸುವಂತೆ ಅರಣ್ಯ ಇಲಾಖೆಯ ಸಿಬ್ಬಂದಿಗೆ ತಿಳಿಸಲಾಯಿತು. ಕಳೆದ ಏಳು ವರ್ಷದಲ್ಲಿ ಇದೇ ರೀತಿ ಕಳ್ಳ ಬೇಟೆಯಾಡಲು ಪ್ರಯತ್ನಿಸಿದವರನ್ನು ಅರಣ್ಯ ಇಲಾಖೆ ಗಮನಕ್ಕೆ ತಂದು ಎಫ್ಐಆರ್ ಕೂಡ ದಾಖಲಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು