8:41 PM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ

07/08/2025, 19:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ರೈಲ್ವೆ ನಿಲ್ದಾಣದ ಬಳಿ ಇರುವ ರಾಂಪುರ ಹಳೆಯ ಸೇತುವೆಯ ನದಿ ತೀರದಲ್ಲಿ ನೀರು ನಾಯಿಗೆ ಬೇಟೆಯಾಡಲು ಬಳಸುವ ಬೋನುಗಳನ್ನು ಇರಿಸುತ್ತಿದ್ದ ವಿರುದ್ಧ ಸಾಮಾಜಿಕ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದ್ದಾರೆ.


ಸಾಮಾಜಿಕ ಕಾರ್ಯಕರ್ತರು ಕಾರ್ಯನಿಮಿತ ರಾಂಪುರ ಮಾರ್ಗದಿಂದ ಶ್ರೀರಂಗಪಟ್ಟಣಕ್ಕೆ ಬರುವ ಸೇತುವೆಯ ಮೇಲ್ಬಾಗದಿಂದ ಬೋನ್ ಗಳನ್ನು ಗಮನಿಸಿದ್ದಾರೆ. ಶ್ರೀರಂಗಪಟ್ಟಣ ಚಂದನ್ ನೇತ್ರತ್ವದಲ್ಲಿ ಬೋನ್ ಹಾಕುತ್ತಿರುವ ವ್ಯಕ್ತಿಯನ್ನು ವಿಚಾರಿಸಿದಾಗ ಮೀನು ಹಿಡಿಯಲು ಬೋನ್ ಹಾಕುತ್ತಿದ್ದೇವೆ ಎಂದು ಹೇಳಿದ ತಕ್ಷಣದಲ್ಲೇ ಶ್ರೀರಂಗಪಟ್ಟಣ ಹಿರಿಯ ಸ್ವಯಂ ಸೇವಕರಾದ ಲಕ್ಷ್ಮೀನಾರಾಯಣ, ಕರವೇ ತಾಲೂಕು ಅಧ್ಯಕ್ಷರಾದ ಚಂದ್ಗಾಲ್ ಶಂಕ್ರಣ್ಣ ಪೈಲ್ವಾನ್ ಸತೀಶ್ , ಗಂಜಾಂ ಮೀನುಗಾರರ ಸೊಸೈಟಿಯ ನಿರ್ದೇಶಕರಾದ ಶ್ರೀಯುತ ಗುಲ್ಕನ್ ರಾಮಣ್ಣ ಸಮ್ಮುಖದಲ್ಲಿ ಈ ಅಕ್ರಮವನ್ನು ತಕ್ಷಣದಲ್ಲಿ ಶ್ರೀರಂಗಪಟ್ಟಣ ಅರಣ್ಯ ಇಲಾಖೆಯ ಗಮನಕ್ಕೆ ತಂದರು. ಅರಣ್ಯ ಇಲಾಖೆಯ ವಾಚರ್ ಗಳಾದ ಬಸವರಾಜುರವರು ಹಾಗೂ ತುಳಸಿ ರವರು ಖುದ್ದು ಸ್ಥಳಕ್ಕೆ ಬಂದು ಬೋನ್ ಗಳನ್ನು ಸೀಜ್ ಮಾಡಿ ದೂರು ದಾಖಲಿಸುವಂತೆ ಒತ್ತಾಯಿಸಲಾಯಿತು. ಹುಲಿಯಷ್ಟೇ ಪ್ರಾಮುಖ್ಯತೆ ಉಳ್ಳ ನೀರು ನಾಯಿಗಳ ಉಳಿವು ಸಾರ್ವಜನಿಕರ ಕರ್ತವ್ಯದೊಂದಿಗೆ ಅರಣ್ಯ ಇಲಾಖೆಯ ಕರ್ತವ್ಯವು ಹೌದು ಹಾಗೂ ಈ ರೀತಿ ಮೀನುಗಾರರ ಸಂಘದವರು ಎಂದು ಹೇಳಿಕೊಂಡು ಬೋನ್ ಗಳನ್ನು ಇರಿಸುವವರಿಗೆ ಮೀನುಗಾರರ ಸಂಘದಿಂದ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿ ಪರಿಸರದ ನದಿ ತೀರದ ಜಲಚರ ಪ್ರಾಣಿಗಳನ್ನು ಉಳಿವಿಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮವಾಗಬೇಕೆಂದು ಒತ್ತಾಯಿಸಿದರು. ಶ್ರೀರಂಗಪಟ್ಟಣದ ನದಿ ತೀರದಲ್ಲಿ ರಾತ್ರಿಯ ವೇಳೆ ಅತಿ ಹೆಚ್ಚು ನೀರು ನಾಯಿ ಬೇಟೆಯಾಡುವ ಕಳ್ಳ ಬೇಟೆಗಾರರು ತಡೆಯಲು ಕ್ರಮಸೂಚಿಸುವಂತೆ ಅರಣ್ಯ ಇಲಾಖೆಯ ಸಿಬ್ಬಂದಿಗೆ ತಿಳಿಸಲಾಯಿತು. ಕಳೆದ ಏಳು ವರ್ಷದಲ್ಲಿ ಇದೇ ರೀತಿ ಕಳ್ಳ ಬೇಟೆಯಾಡಲು ಪ್ರಯತ್ನಿಸಿದವರನ್ನು ಅರಣ್ಯ ಇಲಾಖೆ ಗಮನಕ್ಕೆ ತಂದು ಎಫ್ಐಆರ್ ಕೂಡ ದಾಖಲಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು