7:04 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಸೃಷ್ಟಿ ಕಲಾವಿದ್ಯಾಲಯ ಯಕ್ಷೋತ್ಸವ: ನಿಯಮದ ನೆಪದಲ್ಲಿ ಯಕ್ಷಗಾನಕ್ಕೆ ಕಿರುಕುಳ ಖಂಡನೀಯ

08/11/2023, 22:41

ಮಂಗಳೂರು(reporterkarnataka.com): ಹೆತ್ತವರು ತಮ್ಮ ಮಕ್ಕಳಿಗೆ ತಮ್ಮೂರಿನ ಸಂಸ್ಕೃತಿ, ಕಲೆಯನ್ನು ಕಲಿಸುವ ಮೂಲಕ ಮುಂದಿನ ಪೀಳಿಗೆಗೆ ಯಶಸ್ವಿಯಾಗಿ ದಾಟಿಸುವ ಕೆಲಸ ಮಾಡಬೇಕು ಎಂದು ಕುಂದೇಶ್ವರ ಪ್ರತಿಷ್ಠಾನ ಅಧ್ಯಕ್ಷ ಜಿತೇಂದ್ರ ಕುಂದೇಶ್ವರ ಹೇಳಿದರು.
ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಬಳಿಯ ಪರಂಪರಾ ಸಭಾಂಗಣದಲ್ಲಿ ಸೃಷ್ಟಿಕಲಾ ವಿದ್ಯಾಲಯದ ಯಕ್ಷೋತ್ಸವ ಉದ್ಘಾಟಿಸಿ ಮಾತನಾಡಿದರು.


ಇತ್ತೀಚೆಗೆ ಕಾನೂನು ನಿಯಮದ ಮೂಲಕ ನಮ್ಮ ಮಣ್ಣಿನ ಸಂಸ್ಕೃತಿಯನ್ನು ಹತ್ತಿಕ್ಕುವ ಕಾರ್ಯ ನಡೆಸುತ್ತಿದೆ. ಕುಂದಾಪುರದ ಹೇರಿಕುದ್ರುವಿನಲ್ಲಿ ರಾತ್ರಿ 10.30ಗೆ ಸಮಯ ಮೀರಿದೆ ಎಂದು ಮಕ್ಕಳ ಯಕ್ಷಗಾನವನ್ನು ನಿಲ್ಲಿಸಿರುವುದು ಖಂಡನೀಯ ಎಂದು ಅವರು ಹೇಳಿದರು.

ಸೃಷ್ಟಿ ಕಲಾವಿದ್ಯಾಲಯ ನೂರಾರು ಮಕ್ಕಳಿಗೆ ಕರಾವಳಿಯ ಗಂಡು ಕಲೆ ಯಕ್ಷಗಾನವನ್ನು ಯಶಸ್ವಿಯಾಗಿ ಬೋಧಿಸುವ ಮೂಲಕ ಉತ್ತಮ ಕೆಲಸ ಮಾಡುತ್ತಿದೆ. ಕರಾವಳಿಯ ಯಕ್ಷಗಾನ ರಾಜಧಾನಿಯಲ್ಲಿ ಎಲ್ಲೆಡೆ ವಿಜೃಂಬಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಎಪಿಎಸ್‌ ಪಬ್ಲಿಕ್‌ ಸ್ಕೂಲ್‌ ಪ್ರಾಂಶುಪಾಲೆ ಶಾಲಿನಿ ಜಗದೀಶ್‌ ಮಾತನಾಡಿ, ಯಕ್ಷಗಾನ ನೋಡುವುದರಿಂದ, ಮಾಡುವುದರಿಂದ ಮನಸ್ಸಿಗೆ ಹಿತವಾಗುತ್ತದೆ ಎಂದು ನುಡಿದರು.
ಸೃಷ್ಟಿ ಕಲಾ ವಿದ್ಯಾಲಯ ಸ್ಥಾಪಕಾಧ್ಯಕ್ಷ ಛಾಯಾಪತಿ ಕಂಚಿಬೈಲ್‌, ಭಾಗವತ ಸುಬ್ರಾಯ ಹೆಬ್ಬಾರ್ ಇದ್ದರು.
ಅನಾರೋಗ್ಯ ನಿಮಿತ್ತ ಕಲಾವಿದ ಸುಬ್ರಹ್ಮಣ್ಯ ಧಾರೇಶ್ವರ ಅವರಿಗೆ ಮನೆಯಲ್ಲಿಯೇ ಸೃಷ್ಟಿ ಕಲಾಭೂಷಣ ಪ್ರಶಸ್ತಿ ನೀಡಲಾಗುವುದು ಎಂದು ವಿದ್ಯಾಲಯದ ಅಧ್ಯಕ್ಷ ಛಾಯಪತಿ ಕಂಚಿಬೈಲ್‌ ತಿಳಿಸಿದರು. ಚೆಂಡೆವಾದಕ ಶ್ರೀನಿವಾಸ ಗುಂಡ ಇದ್ದರು. ಶ್ರೀನಿವಾಸ ಕೆಮ್ತೂರು ಕಾರ್ಯಕ್ರ ನಿರೂಪಿಸಿದರು.
ಯಕ್ಷಗಾನ ಪ್ರದರ್ಶನ: ಕಲಾವಿದ ನಿತ್ಯಾನಂದ ನಾಯಕ್‌ ಮಾರ್ಗದರ್ಶನದಲ್ಲಿ ಸುಬ್ರಾಯ ಹೆಬ್ಬಾರ್‌ ಮತ್ತು ಭರತ್‌ರಾಜ್‌ ಪರ್ಕಳ ನಿರ್ದೇಶನದಲ್ಲಿ ದ್ರೌಪದಿ ಪ್ರತಾಪ ಮತ್ತು ಶ್ವೇತಕುಮಾರ ಚರಿತ್ರೆ ಪ್ರದರ್ಶನಗೊಂಡು ಪ್ರೇಕ್ಷಕರ ಮೆಚ್ಚುಗೆ ಗಳಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು