10:44 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಸೃಷ್ಟಿ ಕಲಾವಿದ್ಯಾಲಯ ಯಕ್ಷೋತ್ಸವ: ನಿಯಮದ ನೆಪದಲ್ಲಿ ಯಕ್ಷಗಾನಕ್ಕೆ ಕಿರುಕುಳ ಖಂಡನೀಯ

08/11/2023, 22:41

ಮಂಗಳೂರು(reporterkarnataka.com): ಹೆತ್ತವರು ತಮ್ಮ ಮಕ್ಕಳಿಗೆ ತಮ್ಮೂರಿನ ಸಂಸ್ಕೃತಿ, ಕಲೆಯನ್ನು ಕಲಿಸುವ ಮೂಲಕ ಮುಂದಿನ ಪೀಳಿಗೆಗೆ ಯಶಸ್ವಿಯಾಗಿ ದಾಟಿಸುವ ಕೆಲಸ ಮಾಡಬೇಕು ಎಂದು ಕುಂದೇಶ್ವರ ಪ್ರತಿಷ್ಠಾನ ಅಧ್ಯಕ್ಷ ಜಿತೇಂದ್ರ ಕುಂದೇಶ್ವರ ಹೇಳಿದರು.
ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಬಳಿಯ ಪರಂಪರಾ ಸಭಾಂಗಣದಲ್ಲಿ ಸೃಷ್ಟಿಕಲಾ ವಿದ್ಯಾಲಯದ ಯಕ್ಷೋತ್ಸವ ಉದ್ಘಾಟಿಸಿ ಮಾತನಾಡಿದರು.


ಇತ್ತೀಚೆಗೆ ಕಾನೂನು ನಿಯಮದ ಮೂಲಕ ನಮ್ಮ ಮಣ್ಣಿನ ಸಂಸ್ಕೃತಿಯನ್ನು ಹತ್ತಿಕ್ಕುವ ಕಾರ್ಯ ನಡೆಸುತ್ತಿದೆ. ಕುಂದಾಪುರದ ಹೇರಿಕುದ್ರುವಿನಲ್ಲಿ ರಾತ್ರಿ 10.30ಗೆ ಸಮಯ ಮೀರಿದೆ ಎಂದು ಮಕ್ಕಳ ಯಕ್ಷಗಾನವನ್ನು ನಿಲ್ಲಿಸಿರುವುದು ಖಂಡನೀಯ ಎಂದು ಅವರು ಹೇಳಿದರು.

ಸೃಷ್ಟಿ ಕಲಾವಿದ್ಯಾಲಯ ನೂರಾರು ಮಕ್ಕಳಿಗೆ ಕರಾವಳಿಯ ಗಂಡು ಕಲೆ ಯಕ್ಷಗಾನವನ್ನು ಯಶಸ್ವಿಯಾಗಿ ಬೋಧಿಸುವ ಮೂಲಕ ಉತ್ತಮ ಕೆಲಸ ಮಾಡುತ್ತಿದೆ. ಕರಾವಳಿಯ ಯಕ್ಷಗಾನ ರಾಜಧಾನಿಯಲ್ಲಿ ಎಲ್ಲೆಡೆ ವಿಜೃಂಬಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಎಪಿಎಸ್‌ ಪಬ್ಲಿಕ್‌ ಸ್ಕೂಲ್‌ ಪ್ರಾಂಶುಪಾಲೆ ಶಾಲಿನಿ ಜಗದೀಶ್‌ ಮಾತನಾಡಿ, ಯಕ್ಷಗಾನ ನೋಡುವುದರಿಂದ, ಮಾಡುವುದರಿಂದ ಮನಸ್ಸಿಗೆ ಹಿತವಾಗುತ್ತದೆ ಎಂದು ನುಡಿದರು.
ಸೃಷ್ಟಿ ಕಲಾ ವಿದ್ಯಾಲಯ ಸ್ಥಾಪಕಾಧ್ಯಕ್ಷ ಛಾಯಾಪತಿ ಕಂಚಿಬೈಲ್‌, ಭಾಗವತ ಸುಬ್ರಾಯ ಹೆಬ್ಬಾರ್ ಇದ್ದರು.
ಅನಾರೋಗ್ಯ ನಿಮಿತ್ತ ಕಲಾವಿದ ಸುಬ್ರಹ್ಮಣ್ಯ ಧಾರೇಶ್ವರ ಅವರಿಗೆ ಮನೆಯಲ್ಲಿಯೇ ಸೃಷ್ಟಿ ಕಲಾಭೂಷಣ ಪ್ರಶಸ್ತಿ ನೀಡಲಾಗುವುದು ಎಂದು ವಿದ್ಯಾಲಯದ ಅಧ್ಯಕ್ಷ ಛಾಯಪತಿ ಕಂಚಿಬೈಲ್‌ ತಿಳಿಸಿದರು. ಚೆಂಡೆವಾದಕ ಶ್ರೀನಿವಾಸ ಗುಂಡ ಇದ್ದರು. ಶ್ರೀನಿವಾಸ ಕೆಮ್ತೂರು ಕಾರ್ಯಕ್ರ ನಿರೂಪಿಸಿದರು.
ಯಕ್ಷಗಾನ ಪ್ರದರ್ಶನ: ಕಲಾವಿದ ನಿತ್ಯಾನಂದ ನಾಯಕ್‌ ಮಾರ್ಗದರ್ಶನದಲ್ಲಿ ಸುಬ್ರಾಯ ಹೆಬ್ಬಾರ್‌ ಮತ್ತು ಭರತ್‌ರಾಜ್‌ ಪರ್ಕಳ ನಿರ್ದೇಶನದಲ್ಲಿ ದ್ರೌಪದಿ ಪ್ರತಾಪ ಮತ್ತು ಶ್ವೇತಕುಮಾರ ಚರಿತ್ರೆ ಪ್ರದರ್ಶನಗೊಂಡು ಪ್ರೇಕ್ಷಕರ ಮೆಚ್ಚುಗೆ ಗಳಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು