7:17 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಶಾಲೆ ಹೆಸರು ನಮೂದಿಸಲು ರಾಜ್ಯ ಹೈಕೋರ್ಟ್ ಸೂಚನೆ

24/04/2022, 18:07

ಬೆಂಗಳೂರು(reporterkarnataka.com):

ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ವಿವೇಕನಗರದ ಶಾಂತಿನಿಕೇತನ ಪ್ರೌಢಶಾಲೆ ಸೇರಿದಂತೆ 8 ಶಾಲೆಗಳು ಸಲ್ಲಿಸಿದ್ದ ರಿಟ್‌ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಕೃಷ್ಣ ಭಟ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಎಸ್ ಎಸ್ ಎಲ್ ಸಿ  ಅಂಕಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸಬೇಕು ಎಂದು ಆದೇಶಿಸಿದೆ.

ಅರ್ಜಿದಾರರ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳ ಎಸ್‌ಎಸ್ ಎಲ್ ಸಿ ಅಂಕಪಟ್ಟಿಗಳಲ್ಲಿ ಅವರ ಶಾಲೆಗಳ ಹೆಸರು ನಮೂದಿಸಲು ನಿರಾಕರಿಸುವುದು ಏಕಪಕ್ಷೀಯ ನಿರ್ಧಾರವಾಗಲಿದೆ. ಎಸ್‌ಎಸ್ ಎಲ್ ಸಿ ವಿದ್ಯಾರ್ಥಿಗಳ ಅಂಕಪಟ್ಟಿ ಹಾಗೂ ಫಲಿತಾಂಶ ಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ನಿರ್ದೇಶಕರು ಮತ್ತು ಎಸ್‌ಎಸ್ ಎಲ್ ಸಿ ಪರೀಕ್ಷಾ ಮಂಡಳಿಗೆ ನಿರ್ದೇಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು