5:19 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಶಾಲೆ ಹೆಸರು ನಮೂದಿಸಲು ರಾಜ್ಯ ಹೈಕೋರ್ಟ್ ಸೂಚನೆ

24/04/2022, 18:07

ಬೆಂಗಳೂರು(reporterkarnataka.com):

ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ವಿವೇಕನಗರದ ಶಾಂತಿನಿಕೇತನ ಪ್ರೌಢಶಾಲೆ ಸೇರಿದಂತೆ 8 ಶಾಲೆಗಳು ಸಲ್ಲಿಸಿದ್ದ ರಿಟ್‌ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಕೃಷ್ಣ ಭಟ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಎಸ್ ಎಸ್ ಎಲ್ ಸಿ  ಅಂಕಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸಬೇಕು ಎಂದು ಆದೇಶಿಸಿದೆ.

ಅರ್ಜಿದಾರರ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳ ಎಸ್‌ಎಸ್ ಎಲ್ ಸಿ ಅಂಕಪಟ್ಟಿಗಳಲ್ಲಿ ಅವರ ಶಾಲೆಗಳ ಹೆಸರು ನಮೂದಿಸಲು ನಿರಾಕರಿಸುವುದು ಏಕಪಕ್ಷೀಯ ನಿರ್ಧಾರವಾಗಲಿದೆ. ಎಸ್‌ಎಸ್ ಎಲ್ ಸಿ ವಿದ್ಯಾರ್ಥಿಗಳ ಅಂಕಪಟ್ಟಿ ಹಾಗೂ ಫಲಿತಾಂಶ ಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ನಿರ್ದೇಶಕರು ಮತ್ತು ಎಸ್‌ಎಸ್ ಎಲ್ ಸಿ ಪರೀಕ್ಷಾ ಮಂಡಳಿಗೆ ನಿರ್ದೇಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು