8:06 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸ್ಪೀಕರ್ ಖಾದರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರತಿಪಕ್ಷದ ನಾಯಕ ಆರ್. ಅಶೋಕ್ ಶುಭ ಹಾರೈಕೆ

21/03/2025, 17:40

ಬೆಂಗಳೂರು (reporterkarnataka.com):
ರಾಜ್ಯದಲ್ಲಿ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು,15,881 ಪರೀಕ್ಷಾ ಕೇಂದ್ರಗಳಲ್ಲಿ 8,96,447 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ, ಪೋಷಕರು ವಿದ್ಯಾರ್ಥಿಗಳಿಗೆ ಭಾವನಾತ್ಮಕ ಬೆಂಬಲ ನೀಡುವುದು ಮುಖ್ಯ. ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮೊದಲನೇ ಹಂತ ಅದು ಅಂತ್ಯವಲ್ಲ ಆರಂಭ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ ಹೇಳಿದರು.
ವಿಧಾನಸಭೆಯಲ್ಲಿಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಶುಭ ಕೋರಿ ಮಾತನಾಡಿದ ಸಭಾದ್ಯಕ್ಷರು ವಿದ್ಯಾರ್ಥಿಗಳು ರಾತ್ರಿ ಹಗಲೆನ್ನದೇ ಪರಿಶ್ರಮಪಟ್ಟು ಪರೀಕ್ಷೆಗೆ ಸಿದ್ದವಾಗಿರುವ ಎಲ್ಲಾ ವಿದ್ಯಾರ್ಥಿಗಳು ಮನೋ ಸ್ಥೈರ್ಯದಿಂದ ಪರೀಕ್ಷೆ ಎದುರಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಇತ್ತೀಚಿನ ಸುದ್ದಿ

ಜಾಹೀರಾತು