11:11 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ: ನಂಜನಗೂಡಿನ ಶ್ರೀ ನೀಲಕಂಠೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

12/05/2024, 11:30

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ನಂಜನಗೂಡಿನ ಪ್ರತಿಷ್ಠಿತ ಶ್ರೀ ನೀಲಕಂಠೇಶ್ವರ ಆಂಗ್ಲ ಮಾಧ್ಯಮ ಶಾಲೆಯು ಶೇಕಡ 100ಕ್ಕೆ100 ರಷ್ಟು ಫಲಿತಾಂಶ ಪಡೆದು ಉತ್ತಮ ಸಾಧನೆ ಮಾಡಿದೆ.


ಕಳೆದ ಸಾಲಿನ ಮೊದಲ ಬ್ಯಾಚ್ ನಲ್ಲಿ ಶಾಲೆಯು ಶೇಕಡ 98% ಫಲಿತಾಂಶ ಪಡೆದರೆ ಈ ಬಾರಿ ಎರಡನೇ ಬ್ಯಾಚ್ ನಲ್ಲಿ ಶೇಕಡ ನೂರರಷ್ಟು ಫಲಿತಾಂಶ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ.
ಪರೀಕ್ಷೆಗೆ ಹಾಜರಾಗಿದ್ದ 31 ವಿದ್ಯಾರ್ಥಿಗಳೂ ತೇರ್ಗಡೆಯಾಗಿದ್ದು ಅದರಲ್ಲಿ ಎಂಟು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದರೆ ,16 ವಿದ್ಯಾರ್ಥಿಗಳು ಪ್ರಥಮ ಹಾಗೂ 7 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿ ಸಂಸ್ಥೆಗೆ ಕೀರ್ತಿ ತಂದುಕೊಟ್ಟಿದ್ದಾರೆ.
ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕುಮಾರ್ ಹಾಗೂ ಮುಖ್ಯ ಶಿಕ್ಷಕಿ ರಾಜೇಶ್ವರಿ ಮಾತನಾಡಿ ಈ ಫಲಿತಾಂಶ ತರುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಶಿಕ್ಷಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಅಲ್ಲದೆ ಶಾಲಾ ಆಡಳಿತ ಮಂಡಳಿಯ ಜವಾಬ್ದಾರಿ ಮತ್ತು ಪೋಷಕರ ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಉತ್ತಮವಾಗಿ ಬೆಳೆಯುತ್ತಿದೆ. ಮುಂದಿನ ವರ್ಷದಲ್ಲಿ ತಾಲೂಕು ಅಥವಾ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಬರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸುತ್ತಾ ಸಂತಸ ವ್ಯಕ್ತಪಡಿಸಿ ಫಲಿತಾಂಶದ ಬಗ್ಗೆ ವಿವರಿಸಿದರು.
ಸಂಸ್ಥೆಯ ಜಂಟಿ ಕಾರ್ಯದರ್ಶಿ, ಮಂಜುಳಾ, ಮುಖ್ಯ ಶಿಕ್ಷಕಿ ರಾಜೇಶ್ವರಿ, ಕೋ ಆರ್ಡಿನೇಟರ್ ಮಮತಾ, ಅಡ್ವೈಸರ್ ಮಂಜುಳಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು