2:22 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ; ಕಳೆದ ವರ್ಷದಂತೆ ಈ ಬಾರಿ ‘ಕೊರೊನಾ ಪಾಸ್’ ಇಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

22/01/2022, 12:17

ಬೆಂಗಳೂರು(reporterkarnataka.com): ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ

ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಕಳೆದ ವರ್ಷ ಕೋವಿಡ್ ಸಾಂಕ್ರಾಮಿಕ ರೋಗದಿಂದ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೆ ಉತ್ತೀರ್ಣರಾದ ಬಗ್ಗೆ ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿರುವ ಸಚಿವರು, 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು. ಕಳೆದ ವರ್ಷ ನೀಡಿದ್ದ ಸೌಲಭ್ಯ, ವ್ಯವಸ್ಥೆಯನ್ನೇ ಈ ಬಾರಿಯೂ ವಿಸ್ತರಿಸಿದರೆ, ವಿದ್ಯಾರ್ಥಿಗಳು ಓದುವುದನ್ನೇ ಮರೆತು ಬಿಡುತ್ತಾರೆ. ಇದರಿಂದ ಕೆಟ್ಟ ಪ್ರವೃತ್ತಿಯೊಂದನ್ನು ಬೆಳೆಸಿದಂತಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯದ ಬಹುತೇಕ ಎಲ್ಲಾ ಶಾಲೆಗಳು ಶೇ. 70 ರಷ್ಟು ಪಠ್ಯಕ್ರಮವನ್ನು ಪೂರ್ಣಗೊಳಿಸಿವೆ, ವಿದ್ಯಾರ್ಥಿಗಳಿಗೆ ಸಹಾಯಕವಾಗಲು ಶೇಕಡಾ 30 ರಷ್ಟು ಪಠ್ಯಕ್ರಮ ಕಡಿಮೆ ಮಾಡಲಾಗಿದೆ. ಫೆಬ್ರವರಿ ಕೊನೆಯ ವಾರದಲ್ಲಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ಕೋವಿಡ್ ತೀವ್ರವಾಗಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ, ಆದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್‌ನಿಂದ ಏಪ್ರಿಲ್ 11 ರ ಕೊನೆಯ ವಾರದಲ್ಲಿ ನಡೆಯಲಿವೆ. ಆ ಸಮಯದ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರೌಢಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ವಿಚಾರ ಕುರಿತು ಮಾತನಾಡಿ, ಆದರೆ, ಶೈಕ್ಷಣಿಕ ವರ್ಷ ಆರಂಭವಾದಾಗಲೇ ಈ ಆದೇಶಗಳಿದ್ದವು. ಮುಂದಿನ -23 ಶೈಕ್ಷಣಿಕ ವರ್ಷದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದಿದ್ದಾರೆ.

ಶಿಕ್ಷಕರ ವರ್ಗಾವಣೆ ವಿಚಾರ ಕುರಿತು ಮಾತನಾಡಿ, ಕೆಲವು ಶಿಕ್ಷಕರು ಸುಮಾರು ಎರಡರಿಂದ ಮೂರು ವರ್ಷಗಳ ಹಿಂದೆ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯವು ಕೆಲವು ತಿಂಗಳ ಹಿಂದಷ್ಟೇ ಪ್ರಕರಣವನ್ನು ವಿಲೇವಾರಿ ಮಾಡಿತ್ತು. ಆದೇಶ ಹೊರಬಿದ್ದ ನಂತರ ಶಿಕ್ಷಕರು ವರ್ಗಾವಣೆ ಕೇಳಲು ಆರಂಭಿಸಿದರು. ‘‘ನ್ಯಾಯಾಲಯದ ಆದೇಶ ಹಾಗೂ ಶಿಕ್ಷಕರ ನಿಜವಾದ ಬೇಡಿಕೆಗಳನ್ನು ಗೌರವಿಸಬೇಕು. ವರ್ಗಾವಣೆ ಪ್ರಕ್ರಿಯೆ ಆರಂಭಿಸಿದ್ದರೂ, ತೀವ್ರ ಕೊರತೆ ಇರುವ ಕಡೆಯಿಂದ ಶಿಕ್ಷಕರನ್ನು ಸ್ಥಳಾಂತರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು