2:49 PM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಸಂತ ಅನ್ನಾ ಜನ್ಮದಿನಾಚರಣೆ: ಕಿರು‌ನಾಟಕ, ನೃತ್ಯ ಪ್ರದರ್ಶನ

24/07/2024, 23:08

ಮಂಗಳೂರು(reporterkarnataka.com): ನಗರದ ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಸಂತ ಅನ್ನಾ ಅವರ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಪ್ರಥಮವಾಗಿ ಫಾ. ರಿಚರ್ಡ್ ಕಪುಚಿನ್ ಅವರಿಂದ ಬಲಿಪೂಜೆ ಅರ್ಪಿಸಲಾಯಿತು. ನಂತರದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಿ. ನಿರ್ಮಲಾ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಂತ ಅನ್ನಾ ಅವರ ಬಗ್ಗೆ ಮಾತನಾಡಿ ಅವರ 5 ಗುಣಗಳಾದ ಮೌನತೆ, ಪ್ರಾರ್ಥನೆ, ದಾನ ಧರ್ಮ, ಸರಳತೆ, ಪ್ರೀತಿ, ಗೌರವ ನಮ್ಮ ಜೀವನದಲ್ಲಿ ಅಳವಡಿಸಬೇಕೆಂದರು.
ಸಂತ ಅನ್ನಾ ಅವರ ಈ 5 ಗುಣಗಳನ್ನು ಅಳವಡಿಸಿ ಕ್ವಿಜನ್ನು ಏರ್ಪಡಿಸಲಾಯಿತು. ಕ್ವಿಜಿನಲ್ಲಿ ವಿಜೇತರನ್ನು ಸಿ. ನಿರ್ಮಲಾ ಅವರು ಪ್ರಶಂಸಿದರು. ಕಾಲೇಜಿನ ಪ್ರಾಂಶುಪಾಲೆ ಸಿ. ವಿನೂತ ಅವರು ಸಂತ ಅನ್ನಾ ಅವರ ಬಗ್ಗೆ ತಿಳಿ ಹೇಳಿದರು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಕಾರ್ಮೆಲ್ ಮಾಜಿ ಶಿಕ್ಷಕಿ ಮಾರ್ಗರೇಟ್ ಮೊಂತೇರೊ, ಶಿಕ್ಷಕಿಯಾದ ಅಸುಂತಾ ಡಿಸೋಜ, ಶೇರಿನ್, ಪ್ರತಿಭಾ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂತ ಅನ್ನಾ ಅವರ ಜೀವನದ ಬಗ್ಗೆ ಕಿರು ನಾಟಕ, ನೃತ್ಯ ಹಾಗೂ ಇತರ ಕಾರ್ಯಕ್ರಮಗಳು ನಡೆಯಿತು. ಭಾರತಿ ಕಾರ್ಯಕ್ರಮ ನಿರ್ವಹಿಸಿದರು. ಸಾರಾ ಅವರು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು