7:01 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಸಂತ ಅನ್ನಾ ಜನ್ಮದಿನಾಚರಣೆ: ಕಿರು‌ನಾಟಕ, ನೃತ್ಯ ಪ್ರದರ್ಶನ

24/07/2024, 23:08

ಮಂಗಳೂರು(reporterkarnataka.com): ನಗರದ ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಸಂತ ಅನ್ನಾ ಅವರ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಪ್ರಥಮವಾಗಿ ಫಾ. ರಿಚರ್ಡ್ ಕಪುಚಿನ್ ಅವರಿಂದ ಬಲಿಪೂಜೆ ಅರ್ಪಿಸಲಾಯಿತು. ನಂತರದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಿ. ನಿರ್ಮಲಾ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಂತ ಅನ್ನಾ ಅವರ ಬಗ್ಗೆ ಮಾತನಾಡಿ ಅವರ 5 ಗುಣಗಳಾದ ಮೌನತೆ, ಪ್ರಾರ್ಥನೆ, ದಾನ ಧರ್ಮ, ಸರಳತೆ, ಪ್ರೀತಿ, ಗೌರವ ನಮ್ಮ ಜೀವನದಲ್ಲಿ ಅಳವಡಿಸಬೇಕೆಂದರು.
ಸಂತ ಅನ್ನಾ ಅವರ ಈ 5 ಗುಣಗಳನ್ನು ಅಳವಡಿಸಿ ಕ್ವಿಜನ್ನು ಏರ್ಪಡಿಸಲಾಯಿತು. ಕ್ವಿಜಿನಲ್ಲಿ ವಿಜೇತರನ್ನು ಸಿ. ನಿರ್ಮಲಾ ಅವರು ಪ್ರಶಂಸಿದರು. ಕಾಲೇಜಿನ ಪ್ರಾಂಶುಪಾಲೆ ಸಿ. ವಿನೂತ ಅವರು ಸಂತ ಅನ್ನಾ ಅವರ ಬಗ್ಗೆ ತಿಳಿ ಹೇಳಿದರು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಕಾರ್ಮೆಲ್ ಮಾಜಿ ಶಿಕ್ಷಕಿ ಮಾರ್ಗರೇಟ್ ಮೊಂತೇರೊ, ಶಿಕ್ಷಕಿಯಾದ ಅಸುಂತಾ ಡಿಸೋಜ, ಶೇರಿನ್, ಪ್ರತಿಭಾ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂತ ಅನ್ನಾ ಅವರ ಜೀವನದ ಬಗ್ಗೆ ಕಿರು ನಾಟಕ, ನೃತ್ಯ ಹಾಗೂ ಇತರ ಕಾರ್ಯಕ್ರಮಗಳು ನಡೆಯಿತು. ಭಾರತಿ ಕಾರ್ಯಕ್ರಮ ನಿರ್ವಹಿಸಿದರು. ಸಾರಾ ಅವರು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು