3:41 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸ್ಥಳ ಮಹಜರು: ಕೋಟೆಕಾರು ದರೋಡೆ ಪ್ರಕರಣದ ಆರೋಪಿ ಪರಾರಿಗೆ ಯತ್ನ; ಪೊಲೀಸರ ಗುಂಡೇಟು, ಆಸ್ಪತ್ರೆಗೆ ದಾಖಲು

21/01/2025, 23:46

ಮಂಗಳೂರು(reporterkarnataka.com): ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡು ಹಾರಿಸಿದ್ದಾರೆ.

ತಮಿಳುನಾಡಿನ ತಿರುವೈಯಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರು ಪೊಲೀಸರು ಸ್ಥಳ ಮಹಜರಿಗೆ ಕರೆದು ತಂದಿದ್ದರು.
ಆರೋಪಿಗಳನ್ನು ಉಳ್ಳಾಲಕ್ಕೆ ಕರೆದೊಯ್ಯುತ್ತಿದ್ದ ವೇಳೆ ಕೆ.ಸಿ. ರೋಡ್ ಬಳಿ ಕಣ್ಣನ್ ಮಣಿ (35) ಎಂಬಾತನ ಪರಾರಿಯಾಗಲು ಯತ್ನಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಪೊಲೀಸರು ಆರೋಪಿಯ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಪೊಲೀಸರು ಗಾಯಗೊಂಡಿದ್ದಾರೆ.
ಕಣ್ಣನ್ ಮಣಿ ಮೂಲತಃ ತಮಿಳುನಾಡು ನಿವಾಸಿ.
ಸದ್ಯ ಮುಂಬೈ ನಗರದ ಚೆಂಬೂರಿನಲ್ಲಿ ನೆಲೆಸಿದ್ದಾನೆ. ಧಾರಾವಿ ಗ್ಯಾಂಗ್ ನಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಮಣಿಯನ್ನು ಮಂಗಳೂರು ಸಿಸಿಬಿ ಮತ್ತು ಉಳ್ಳಾಲ ಪೊಲೀಸರು ಸ್ಥಳ ಮಹಜರು ನಡೆಸುವ ಸಲುವಾಗಿ ತಲಪಾಡಿ ಬಳಿಯ ಕೆ.ಸಿ. ರೋಡ್ ಅಲಂಕಾರ ಗುಡ್ಡೆಗೆ ಕರೆದೊಯ್ದಿದ್ದರು. ಅಲ್ಲಿ ಜೀಪಿನಿಂದ ಇಳಿಯುತ್ತಲೇ ಪೊಲೀಸರಿಗೆ ಹಲ್ಲೆಗೈದು ಪರಾರಿಗೆ ಯತ್ನಿಸಿದ್ದಾನೆ. ಸ್ಥಳದಲ್ಲಿ ಬಿದ್ದಿದ್ದ ಬಿಯರ್ ಬಾಟಲಿಯ ಚೂರಿನಿಂದ ಹಲ್ಲೆಗೆ ಯತ್ನಿಸಿದ್ದು ಸಿಸಿಬಿ ಇನ್ಸ್ ಪೆಕ್ಟರ್ ಆರೋಪಿ ಕಾಲಿಗೆ ಗುಂಡೇಟು ಹೊಡೆದಿದ್ದಾರೆ.
ಘಟನೆಯಲ್ಲಿ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಪೇದೆಗಳಾದ ಆಂಜಿನಪ್ಪ, ನಿತಿನ್ ಎಂಬವರಿಗೆ ಗಾಯಗಳಾಗಿವೆ. ಗಾಯಗೊಂಡ ಪೊಲೀಸರು ಮತ್ತು ಆರೋಪಿಯನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡೇಟು ಪ್ರಕರಣದ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು