6:29 PM Friday6 - June 2025
ಬ್ರೇಕಿಂಗ್ ನ್ಯೂಸ್
Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ… Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ…

ಇತ್ತೀಚಿನ ಸುದ್ದಿ

ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ

05/06/2025, 13:08

ಮಂಡ್ಯ/ ಬೀದರ್ (reporterkarnataka.com): ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ 11 ಜನ ಮೃತಪಟ್ಟಿದ್ದು ದುರದೃಷ್ಟಕರ, ಮೃತರ ಕುಟುಂಬಗಳಿಗೆ ಆರ್ ಸಿಬಿ ತಂಡ ಕೂಡ ಪರಿಹಾರ ಕೊಡಬೇಕು ಎಂದು ಶಾಸಕರಾದ ಮಂಡ್ಯದ ದಿನೇಶ ಗೂಳಿಗೌಡ ಹಾಗೂ ಬೀದರ್ ನ ಭೀಮರಾವ್ ಪಾಟೀಲ್ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಐಪಿಎಲ್ ಫೈನಲ್ ನಲ್ಲಿ ವಿಜಯಿಯಾಗಿರುವ ಆರ್ ಸಿಬಿ ತಂಡವನ್ನು ನೋಡಲು, ಅವರನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಅಭಿಮಾನಿಗಳು ಮಂಗಳವಾರ ರಾತ್ರಿಯೇ ರಾಜ್ಯದ ಮೂಲೆ, ಮೂಲೆಗಳಿಂದ ಬೆಂಗಳೂರಿಗೆ ಬಂದಿದ್ದರು.
ಬುಧವಾರ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ 11 ಜನ ಮೃತಪಟ್ಟಿದ್ದಾರೆ. ಆರ್ ಸಿಬಿ ಕೋಟ್ಯಂತರ‌ ಕ್ರಿಕೆಟ್ ಅಭಿಮಾನಿಗಳನ್ನು ಹೊಂದಿದೆ. ಐಪಿಎಲ್ ಗೆಲುವಿನಿಂದ ಕೋಟ್ಯಾಂತರ ಹಣ ಗಳಿಸಿದೆ. ಅಭಿಮಾನಿವಳ ರಕ್ಷಣೆ ಅವರದ್ದೂ ಜವಾಬ್ದಾರಿ. ಆದರೆ ಆರ್ ಸಿಬಿಯಾಗಲಿ ಅಥವಾ ಕೆಸಿಎ ಆಗಲಿ ಯಾವುದೇ ಪರಿಹಾರ ಘೋಷಿಸಿಲ್ಲ.‌
ಇಂಥ ದುರಂತದ‌ ಸಂದರ್ಭದಲ್ಲಿ ಮಾನವೀಯತೆ ದೃಷ್ಟಿಯಿಂದ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಶಾಸಕದ್ವಯರು ಒತ್ತಾಯ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು