4:10 AM Tuesday17 - June 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ…

ಇತ್ತೀಚಿನ ಸುದ್ದಿ

ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ

05/06/2025, 13:08

ಮಂಡ್ಯ/ ಬೀದರ್ (reporterkarnataka.com): ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ 11 ಜನ ಮೃತಪಟ್ಟಿದ್ದು ದುರದೃಷ್ಟಕರ, ಮೃತರ ಕುಟುಂಬಗಳಿಗೆ ಆರ್ ಸಿಬಿ ತಂಡ ಕೂಡ ಪರಿಹಾರ ಕೊಡಬೇಕು ಎಂದು ಶಾಸಕರಾದ ಮಂಡ್ಯದ ದಿನೇಶ ಗೂಳಿಗೌಡ ಹಾಗೂ ಬೀದರ್ ನ ಭೀಮರಾವ್ ಪಾಟೀಲ್ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಐಪಿಎಲ್ ಫೈನಲ್ ನಲ್ಲಿ ವಿಜಯಿಯಾಗಿರುವ ಆರ್ ಸಿಬಿ ತಂಡವನ್ನು ನೋಡಲು, ಅವರನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಅಭಿಮಾನಿಗಳು ಮಂಗಳವಾರ ರಾತ್ರಿಯೇ ರಾಜ್ಯದ ಮೂಲೆ, ಮೂಲೆಗಳಿಂದ ಬೆಂಗಳೂರಿಗೆ ಬಂದಿದ್ದರು.
ಬುಧವಾರ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ 11 ಜನ ಮೃತಪಟ್ಟಿದ್ದಾರೆ. ಆರ್ ಸಿಬಿ ಕೋಟ್ಯಂತರ‌ ಕ್ರಿಕೆಟ್ ಅಭಿಮಾನಿಗಳನ್ನು ಹೊಂದಿದೆ. ಐಪಿಎಲ್ ಗೆಲುವಿನಿಂದ ಕೋಟ್ಯಾಂತರ ಹಣ ಗಳಿಸಿದೆ. ಅಭಿಮಾನಿವಳ ರಕ್ಷಣೆ ಅವರದ್ದೂ ಜವಾಬ್ದಾರಿ. ಆದರೆ ಆರ್ ಸಿಬಿಯಾಗಲಿ ಅಥವಾ ಕೆಸಿಎ ಆಗಲಿ ಯಾವುದೇ ಪರಿಹಾರ ಘೋಷಿಸಿಲ್ಲ.‌
ಇಂಥ ದುರಂತದ‌ ಸಂದರ್ಭದಲ್ಲಿ ಮಾನವೀಯತೆ ದೃಷ್ಟಿಯಿಂದ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಶಾಸಕದ್ವಯರು ಒತ್ತಾಯ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು