7:21 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ

05/06/2025, 13:08

ಮಂಡ್ಯ/ ಬೀದರ್ (reporterkarnataka.com): ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ 11 ಜನ ಮೃತಪಟ್ಟಿದ್ದು ದುರದೃಷ್ಟಕರ, ಮೃತರ ಕುಟುಂಬಗಳಿಗೆ ಆರ್ ಸಿಬಿ ತಂಡ ಕೂಡ ಪರಿಹಾರ ಕೊಡಬೇಕು ಎಂದು ಶಾಸಕರಾದ ಮಂಡ್ಯದ ದಿನೇಶ ಗೂಳಿಗೌಡ ಹಾಗೂ ಬೀದರ್ ನ ಭೀಮರಾವ್ ಪಾಟೀಲ್ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಐಪಿಎಲ್ ಫೈನಲ್ ನಲ್ಲಿ ವಿಜಯಿಯಾಗಿರುವ ಆರ್ ಸಿಬಿ ತಂಡವನ್ನು ನೋಡಲು, ಅವರನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಅಭಿಮಾನಿಗಳು ಮಂಗಳವಾರ ರಾತ್ರಿಯೇ ರಾಜ್ಯದ ಮೂಲೆ, ಮೂಲೆಗಳಿಂದ ಬೆಂಗಳೂರಿಗೆ ಬಂದಿದ್ದರು.
ಬುಧವಾರ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ 11 ಜನ ಮೃತಪಟ್ಟಿದ್ದಾರೆ. ಆರ್ ಸಿಬಿ ಕೋಟ್ಯಂತರ‌ ಕ್ರಿಕೆಟ್ ಅಭಿಮಾನಿಗಳನ್ನು ಹೊಂದಿದೆ. ಐಪಿಎಲ್ ಗೆಲುವಿನಿಂದ ಕೋಟ್ಯಾಂತರ ಹಣ ಗಳಿಸಿದೆ. ಅಭಿಮಾನಿವಳ ರಕ್ಷಣೆ ಅವರದ್ದೂ ಜವಾಬ್ದಾರಿ. ಆದರೆ ಆರ್ ಸಿಬಿಯಾಗಲಿ ಅಥವಾ ಕೆಸಿಎ ಆಗಲಿ ಯಾವುದೇ ಪರಿಹಾರ ಘೋಷಿಸಿಲ್ಲ.‌
ಇಂಥ ದುರಂತದ‌ ಸಂದರ್ಭದಲ್ಲಿ ಮಾನವೀಯತೆ ದೃಷ್ಟಿಯಿಂದ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಶಾಸಕದ್ವಯರು ಒತ್ತಾಯ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು