ಇತ್ತೀಚಿನ ಸುದ್ದಿ
ರಾಜ್ಯ ಬಜೆಟ್ | ಕುಕ್ಕೆ ಸುಬ್ರಹ್ಮಣ್ಯ,ಕೊಲ್ಲೂರು ಮೂಕಾಂಬಿಕಾ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆ: 259 ಕಲ್ಯಾಣಿಗಳ ನವೀಕರಣ
06/03/2026, 15:45
ಬೆಂಗಳೂರು(reporterkarnataka.com): ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಾಲಯಗಳ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಮಾತಾ ವೈಷ್ಣೋದೇವಿ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ತಲಾ ₹5,000 ಸಹಾಯಧನ ನೀಡುವುದಾಗಿ ಅವರು ಹೇಳಿದರು.
ಮುಜರಾಯಿ ಇಲಾಖೆಯ ದೇವಾಲಯಗಳಿಗೆ ಒಳಪಟ್ಟಿರುವ 259 ಕಲ್ಯಾಣಿಗಳನ್ನು ಪುನರುಜ್ಜೀವನಗೊಳಿಸಲು ‘ಜಲ ನಿಧಿ ಕಲ್ಯಾಣಿಗಳ ಪುನಃಶ್ಚೇತನ ಯೋಜನೆ’ ಜಾರಿ ಮಾಡುವುದಾಗಿ ತಿಳಿಸಿದರು.
ವಾರಣಾಸಿಯಲ್ಲಿ ಹೊಸ ಛತ್ರ ನಿರ್ಮಾಣ, ಶ್ರೀಶೈಲಂನಲ್ಲಿ ಹೊಸ ಯಾತ್ರಿ ನಿವಾಸ ನಿರ್ಮಾಣ, ತುಳಜಾಪುರದಲ್ಲಿ ಹೊಸ ಛತ್ರ ನಿರ್ಮಾಣ ಮತ್ತು ಮಂತ್ರಾಲಯದ ಶಿಥಿಲಗೊಂಡ ಛತ್ರದ ನವೀಕರಣ ಮಾಡುವುದಾಗಿ ಹೇಳಿದರು.












