9:23 AM Tuesday2 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ಇಂದು ರಾಜ್ಯ ಸಚಿವ ಸಂಪುಟ ಸರ್ಕಸ್ : ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

02/06/2026, 08:43

ಬೆಂಗಳೂರು(reporterkarnataka com): ರಾಜ್ಯ ರಾಜಕಾರಣದ ಸಚಿವ ಸಂಪುಟ ರಚನೆಯ ಕುತೂಹಲ ಈಗ ದೆಹಲಿ ತಲುಪಿದೆ. ನಿನ್ನೆ ಸೋಮವಾರವೇ ನಡೆಯಬೇಕಿದ್ದ ಹೈಕಮಾಂಡ್‌ನ ಪ್ರಮುಖ ಸಭೆಯು ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಅವರು ತಡವಾಗಿ ರಾಜಧಾನಿ ತಲುಪಿದ ಕಾರಣದಿಂದ ಇವತ್ತಿಗೆ ಮುಂದೂಡಿಕೆಯಾಗಿದೆ. ಯಾರಿಗೆ ಒಲಿಯಲಿದೆ ಸಚಿವ ಸ್ಥಾನ?
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಬ್ಬರೂ ತಮ್ಮದೇ ಆದ ಬೆಂಬಲಿಗರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಹೈಕಮಾಂಡ್ ಮುಂದೆ ಇಟ್ಟಿದ್ದಾರೆ. ಮೊದಲ ಸುತ್ತಿನಲ್ಲಿ ಈ ಪಟ್ಟಿಗಳ ಬಗ್ಗೆ ಚರ್ಚೆ ನಡೆಸಿ, ಆ ಬಳಿಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಅಂತಿಮ ಸಚಿವರ ಹೆಸರನ್ನು ಫೈನಲ್ ಮಾಡಲಾಗುತ್ತದೆ. ಇವತ್ತೇ ಈ ಕುರಿತು ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದ್ದು, ನಾಳೆಯೇ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಬಹುದು ಎಂದು ಹೇಳಲಾಗುತ್ತಿದೆ.

ಸಂಭಾವ್ಯ ಸಚಿವರ ರೇಸ್‌ನಲ್ಲಿರುವ ಪ್ರಮುಖರು:

ಡಾ. ಜಿ. ಪರಮೇಶ್ವರ್

ಸತೀಶ್ ಜಾರಕಿಹೊಳಿ

ಎಂ.ಬಿ. ಪಾಟೀಲ್ / ಈಶ್ವರ್ ಖಂಡ್ರೆ

ಕೆ.ಜೆ. ಜಾರ್ಜ್

ಕೆ.ಎಚ್. ಮುನಿಯಪ್ಪ / ಪ್ರಿಯಾಂಕ್ ಖರ್ಗೆ

ಬೈರತಿ ಸುರೇಶ್

ಬಿ.ಕೆ. ಹರಿಪ್ರಸಾದ್

ಯು.ಟಿ. ಖಾದರ್

ರಾಮಲಿಂಗಾರೆಡ್ಡಿ

ಕೆಪಿಸಿಸಿ ಸಾರಥ್ಯಕ್ಕೆ ಸತೀಶ್-ಹರಿಪ್ರಸಾದ್ ಫೈಟ್!
ಮತ್ತೊಂದೆಡೆ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಕ್ಕಿರುವುದರಿಂದ, ಕೆಪಿಸಿಸಿ ಅಧ್ಯಕ್ಷ ಗಾದಿಯನ್ನು ಒಕ್ಕಲಿಗ ಅಥವಾ ಹಿಂದುಳಿದ ವರ್ಗಕ್ಕೆ (OBC) ನೀಡಲು ಕಾಂಗ್ರೆಸ್ ನಾಯಕರು ಒಲವು ತೋರಿದ್ದಾರೆ. ಹೀಗಾಗಿ ಸದ್ಯ ಖಾಲಿ ಇರುವ ಈ ಕೆಪಿಸಿಸಿ ಸಾರಥ್ಯವನ್ನು ವಹಿಸಿಕೊಳ್ಳಲು ಹಿರಿಯ ನಾಯಕರಾದ ಸತೀಶ್ ಜಾರಕಿಹೊಳಿ ಹಾಗೂ ಬಿ.ಕೆ. ಹರಿಪ್ರಸಾದ್ ನಡುವೆ ಭರ್ಜರಿ ಪೈಪೋಟಿ ಶುರುವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು