ಇತ್ತೀಚಿನ ಸುದ್ದಿ
ರಾಜ್ಯ ಸಚಿವ ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಹೈಕಮಾಂಡ್ ಸಭೆ; ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
21/07/2026, 20:15
ನವದೆಹಲಿ(reporterkarnataka.com): ಸಚಿವ ಸಂಪುಟ ವಿಸ್ತರಣೆ ಕುರಿತಂತೆ ದೆಹಲಿಯಲ್ಲಿ ಹೈಕಮಾಂಡ್ ಮಟ್ಟದಲ್ಲಿ ಸಭೆಗಳು ನಡೆಯುತ್ತಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಚಿವ ಸ್ಥಾನ ಹಂಚಿಕೆಯ ಅಂತಿಮ ನಿರ್ಧಾರವನ್ನು ಸಂಪೂರ್ಣವಾಗಿ ಪಕ್ಷದ ವರಿಷ್ಠರು (ಹೈಕಮಾಂಡ್) ಕೈಗೊಳ್ಳಲಿದ್ದು, ದೆಹಲಿ ಸಭೆಯ ನಂತರ ಸಂಪುಟ ವಿಸ್ತರಣೆಯ ದಿನಾಂಕ ಮತ್ತು ನೂತನ ಸಚಿವರ ಪಟ್ಟಿ ಅಂತಿಮಗೊಳ್ಳುವ ನಿರೀಕ್ಷೆಯಿದೆ.
*ಸಂಭಾವ್ಯ ಸಚಿವಾಕಾಂಕ್ಷಿಗಳ ಪಟ್ಟಿ*
ಮಧು ಬಂಗಾರಪ್ಪ, ಎಚ್.ಸಿ. ಮಹದೇವಪ್ಪ, ಪುಟ್ಟರಂಗಶೆಟ್ಟಿ, ದಿನೇಶ್ ಗುಂಡೂರಾವ್, ಶಿವರಾಜ್ ತಂಗಡಗಿ, ಸಂತೋಷ್ ಲಾಡ್, ಬಾಲಕೃಷ್ಣ, ಚೆಲುವರಾಯಸ್ವಾಮಿ, ಎಸ್.ಎಸ್. ಮಲ್ಲಿಕಾರ್ಜುನ್, ಲಕ್ಷ್ಮಣ ಸವದಿ, ಎನ್.ಎ. ಹ್ಯಾರೀಸ್, ಆರತಿ ಕೃಷ್ಣಾ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಹಿರಿಯ ಹಾಗೂ ಯುವ ಶಾಸಕರು ಸಚಿವ ಸ್ಥಾನದ ರೇಸ್ನಲ್ಲಿದ್ದಾರೆ. ಬಣ ರಾಜಕೀಯ ಹಾಗೂ ಪ್ರಾದೇಶಿಕ ಸಮತೋಲನವನ್ನು ಕಾಪಾಡಿಕೊಂಡು ಹೈಕಮಾಂಡ್ ಅಂತಿಮವಾಗಿ ಯಾರಿಗೆ ಮಣೆ ಹಾಕಲಿದೆ ಎಂಬುದು ಇಂದಿನ ದೆಹಲಿ ಸಭೆಯ ಬಳಿಕ ಸ್ಪಷ್ಟಗೊಳ್ಳಲಿದೆ.












