7:44 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ…

ಇತ್ತೀಚಿನ ಸುದ್ದಿ

ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ; ಜಮೀರ್ ಬಗ್ಗೆ ಸಿದ್ದು ಕೇಳಿಲ್ಲವಂತೆ!

06/08/2026, 19:18

ಬೆಂಗಳೂರು(reporterkarnataka.com):ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಮುಗಿದಿದೆ. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಈ ಪ್ರಕ್ರಿಯೆಯ ಹಿಂದೆ ಸಿದ್ದರಾಮಯ್ಯ ಅವರ ಪಾತ್ರವೇನು ಎಂಬ ಚರ್ಚೆಗೆ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಸಿದ್ದರಾಮಯ್ಯ ಅವರು ಹೈಕಮಾಂಡ್ ಮುಂದೆ ಇಟ್ಟಿದ್ದ ಪಟ್ಟಿ ಮತ್ತು ಅದರಲ್ಲಾದ ಬದಲಾವಣೆಗಳ ಬಗ್ಗೆ ಯತೀಂದ್ರ ಮಹತ್ವದ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.
14 ಜನರ ಶಿಫಾರಸ್ಸು ಪಟ್ಟಿ ಸಿದ್ಧಪಡಿಸಿದ್ದ ಸಿದ್ದರಾಮಯ್ಯ
ಯತೀಂದ್ರ ಅವರ ಪ್ರಕಾರ ಸಿದ್ದರಾಮಯ್ಯ ಅವರು ಒಟ್ಟು 14 ಜನರಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಬಳಿ ಶಿಫಾರಸ್ಸು ಮಾಡಿದ್ದರು. ನಮ್ಮ ತಂದೆ ಕೊಟ್ಟಿದ್ದ ಪಟ್ಟಿಯಲ್ಲಿನ ಬಹುತೇಕರಿಗೆ ಸಚಿವ ಸ್ಥಾನ ಸಿಕ್ಕಿದೆ. ಅವರು ಪಕ್ಷದ ಹಿತದೃಷ್ಟಿಯಿಂದಲೇ ಈ ಪಟ್ಟಿಯನ್ನು ಸಿದ್ಧಪಡಿಸಿದ್ದರು ಎಂದು ಯತೀಂದ್ರ ತಿಳಿಸಿದ್ದಾರೆ. ಇದು ಸಂಪುಟದ ಮೇಲೆ ಸಿದ್ದರಾಮಯ್ಯ ಅವರು ಹೊಂದಿದ್ದ ಹಿಡಿತವನ್ನು ತೋರಿಸುತ್ತದೆ.
ಈ ಸಂಪುಟ ವಿಸ್ತರಣೆಯಲ್ಲಿ ಎಚ್.ಸಿ.ಮಹದೇವಪ್ಪ ಅವರಿಗೆ ಸ್ಥಾನ ಸಿಗದಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಯತೀಂದ್ರ, ಸಿದ್ದರಾಮಯ್ಯ ಅವರು ಸಿದ್ಧಪಡಿಸಿದ್ದ ಎರಡು ಹಂತದ ಪಟ್ಟಿಯಲ್ಲೂ ಮಹದೇವಪ್ಪ ಅವರ ಹೆಸರಿತ್ತು. ಅವರಿಗೆ ಸಚಿವ ಸ್ಥಾನ ಕೊಡಿ ಎಂದು ನಮ್ಮ ತಂದೆ ಹೈಕಮಾಂಡ್ ಬಳಿ ಒತ್ತಾಯ ಮಾಡಿದ್ದರು. ಆದರೆ ಹೈಕಮಾಂಡ್ ಮಾತ್ರ ಯಾವುದೋ ಕಾರಣಕ್ಕೆ ಮಹದೇವಪ್ಪ ಅವರಿಗೆ ಸಚಿವ ಸ್ಥಾನ ನೀಡಲು ಒಪ್ಪಲಿಲ್ಲ ಎಂದು ಹೈಕಮಾಂಡ್ ನಡೆಯನ್ನು ವಿವರಿಸಿದ್ದಾರೆ.ಜಮೀರ್ ಬಗ್ಗೆ ಸಿದ್ದರಾಮಯ್ಯ ಕೇಳಿರಲಿಲ್ಲ
ಇನ್ನೊಂದು ಅಚ್ಚರಿಯ ವಿಷಯವೆಂದರೆ ಸಿದ್ದರಾಮಯ್ಯ ಅವರು ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಬಳಿ ಕೇಳಿರಲೇ ಇಲ್ಲವಂತೆ. ಹಾಗೆಯೇ ಗಾಯತ್ರಿ ಅವರಿಗೆ ಸಚಿವ ಸ್ಥಾನ ತಪ್ಪಿದ ವಿಚಾರದಲ್ಲಾಗಲಿ ಅಥವಾ ತನ್ವೀರ್ ಸೇಠ್ ಅವರಿಗೆ ಸ್ಥಾನ ಸಿಗದ ವಿಚಾರದಲ್ಲಾಗಲಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ ಎಂದು ಯತೀಂದ್ರ ಸ್ಪಷ್ಟಪಡಿಸಿದ್ದಾರೆ. ಕೆಲವೊಂದು ಬಾರಿ ಕೆಲವು ಜಾತಿಗಳಿಗೆ ಸ್ಥಾನ ತಪ್ಪುತ್ತದೆ, ಅದನ್ನು ಪಕ್ಷ ಮುಂದೆ ಸರಿದೂಗಿಸುತ್ತದೆ ಎಂದಿದ್ದಾರೆ.

*ಪ್ರಮಾಣ ವಚನಕ್ಕೆ ಬಾರದ ರಹಸ್ಯ:*
ಆಗಸ್ಟ್ 3ರಂದು ನಡೆದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಗೈರಾಗಿದ್ದು ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಆಗಸ್ಟ್ 3 ನಮ್ಮ ತಂದೆಯ ಹುಟ್ಟು ಹಬ್ಬ. ಆ ಕಾರಣಕ್ಕಾಗಿಯೇ ಅವರು ಕಾರ್ಯಕ್ರಮಕ್ಕೆ ಬರಲಿಲ್ಲ. ಸಂಪುಟದ ಬಗ್ಗೆ ಅವರಿಗೆ ಯಾವುದೇ ಅಸಮಾಧಾನ ಇಲ್ಲ ಎಂದು ಯತೀಂದ್ರ ಗೊಂದಲಗಳಿಗೆ ಫುಲ್ ಸ್ಟಾಪ್ ಇಟ್ಟಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಚಿವ ಸ್ಥಾನ ನೀಡಿದ್ದರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ತಂದೆ ಅರ್ಧಕ್ಕೆ ಸಿಎಂ ಸ್ಥಾನದಿಂದ ಕೆಳಗಿಳಿದ ಕಾರಣ ನನಗೆ ಸಚಿವ ಸ್ಥಾನ ನೀಡಲಾಗಿದೆ. ನನಗೆ ಸ್ಥಾನ ನೀಡದಿದ್ದರೆ ಸಹಜವಾಗಿ ನಮ್ಮ ಸಮುದಾಯಕ್ಕೆ ಬೇಜಾರಾಗುತ್ತಿತ್ತು. ಇದರಲ್ಲಿ ಯಾವುದೇ ತಪ್ಪು ಇಲ್ಲ ಎಂದು ತಮ್ಮ ಸಚಿವ ಸ್ಥಾನವನ್ನು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ, ಅಸಮಾಧಾನಗೊಂಡಿರುವ ಹಿರಿಯ ನಾಯಕರಾದ ಮಹದೇವಪ್ಪ ಹಾಗೂ ತನ್ವೀರ್ ಸೇಠ್ ಅವರನ್ನು ಖುದ್ದು ಭೇಟಿಯಾಗಿ ಮಾತನಾಡುವುದಾಗಿ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು