6:28 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ

28/03/2025, 19:53

*ರೈತರ ನೆಪದಲ್ಲಿ ಸರಕಾರ ಬಿಸ್ನೆಸ್ ಮಾಡುತ್ತಿದೆ*

*ಏರಿಕೆ ಹಣ ರೈತರಿಗೋ? ಅಥವಾ ಕೆಎಂಎಫ್ ಗೋ ಎಂದು ಪ್ರಶ್ನೆ*

ನವದೆಹಲಿ(reporterkarnataka.com): ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ಎರಡು ವರ್ಷಗಳ ಸರಣಿ ಸುಲಿಗೆ! ಯುಗಾದಿ ಹಬ್ಬಕ್ಕೆ ಬೆಲೆ ‘ಏರಿಕೆ ಹೋಳಿಗೆ!!’ ಎಂದು ಟಾಂಗ್ ನೀಡಿದ್ದಾರೆ.
ರಾಜ್ಯದಲ್ಲಿ ಹಾಲಿನ ಹಾಲಾಹಲ ಶುರುವಾಗಿದೆ. 3ನೇ ಸಲ ದರ ಏರಿಕೆ ಮಾಡಲಾಗಿದೆ. 2023 ಆಗಸ್ಟ್ ತಿಂಗಳಲ್ಲಿ ₹3, 2024 ಜೂನ್ ತಿಂಗಳಿನಲ್ಲಿ ₹2 ಹಾಗೂ 2025 ಮಾರ್ಚ್, ಅಂದರೆ ಈಗ ₹4 ಏರಿಕೆ ಮಾಡಲಾಗಿದೆ. ಹಾಗೆಯೇ ವಿದ್ಯುತ್ ಕೂಡ ದುಬಾರಿ ಆಗಿದೆ. ಜನರಿಗೆ ವಿದ್ಯುತ್ ಶಾಕ್ ನೀಡಿದ್ದಾರೆ. ಈಗ ಎಲ್ಲರಿಗೂ ಪ್ರತೀ ಯೂನಿಟ್ಟಿಗೆ ₹36 ಪೈಸೆ ಬರೆ. ಮಹಾದೇವಪ್ಪನಿಗೂ ಶಾಕು! ಕಾಕಾ ಪಾಟೀಲಗೂ ಶಾಕು!! ಎಂದು ರಾಜ್ಯ ಸರ್ಕಾರದ ಬಗ್ಗೆ ಕೇಂದ್ರ ಸಚಿವರು ಲೇವಡಿ ಮಾಡಿದ್ದಾರೆ.
ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಕನ್ನಡಿಗರ ಪಾಲಿಗೆ ಮರಣಶಾಸನ. ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ. ನೆಪ ರೈತರದು, ಲಾಭ ಕೆಎಂಎಫ್ ಗೆ! ಕಂಪನಿ ಆಡಳಿತ ನಡೆಸುತ್ತಿದೆ ಸರಕಾರ! ಮೊಸರು ದರ ₹4 ಏರಿಕೆ ಮಾಡಿದ್ದೀರಿ. ಈ ಹಣ ಏನು ಮಾಡುತ್ತೀರಿ? ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ? ಸ್ಪಷ್ಟಪಡಿಸಿ ಎಂದು ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.
*ಇದು ಪ್ರಜಾಪ್ರಭುತ್ವ ಸರಕಾರವಲ್ಲ:*
ದರ ಏರಿಕೆ, ತೆರಿಗೆ ಹೇರಿಕೆ ಸರಕಾರ! ಇದು ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ! ಸುಲಿಗೆಯಷ್ಟೇ ನಿತ್ಯಕೃತ್ಯ. ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ. ಈಸ್ಟ್ ಇಂಡಿಯಾ ಕಾಂಗ್ರೆಸ್!! ಎಂದು ಅವರು ಕಿಡಿ ಕಾರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು