11:12 PM Sunday30 - March 2025
ಬ್ರೇಕಿಂಗ್ ನ್ಯೂಸ್
PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌ Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು… Speaker Talking | ವಿಧಾನ ಸೌಧಕ್ಕೆ ವರ್ಣರಂಜಿತ ದೀಪಾಲಂಕಾರ; ಯಾವಾಗ ಉದ್ಘಾಟನೆ?; ಸ್ಪೀಕರ್… ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ… ಕೋಲಾರ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ; ತೇರಹಳ್ಳಿ… Protest in Delhi | ‘ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ’: ಕೇಂದ್ರ… Medical College | ಗದಗ ಮೆಡಿಕಲ್ ಕಾಲೇಜಿಗೆ ಕೆ.ಎಚ್. ಪಾಟೀಲ್ ಹೆಸರು: ರಾಜ್ಯ…

ಇತ್ತೀಚಿನ ಸುದ್ದಿ

ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ

28/03/2025, 19:53

*ರೈತರ ನೆಪದಲ್ಲಿ ಸರಕಾರ ಬಿಸ್ನೆಸ್ ಮಾಡುತ್ತಿದೆ*

*ಏರಿಕೆ ಹಣ ರೈತರಿಗೋ? ಅಥವಾ ಕೆಎಂಎಫ್ ಗೋ ಎಂದು ಪ್ರಶ್ನೆ*

ನವದೆಹಲಿ(reporterkarnataka.com): ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ಎರಡು ವರ್ಷಗಳ ಸರಣಿ ಸುಲಿಗೆ! ಯುಗಾದಿ ಹಬ್ಬಕ್ಕೆ ಬೆಲೆ ‘ಏರಿಕೆ ಹೋಳಿಗೆ!!’ ಎಂದು ಟಾಂಗ್ ನೀಡಿದ್ದಾರೆ.
ರಾಜ್ಯದಲ್ಲಿ ಹಾಲಿನ ಹಾಲಾಹಲ ಶುರುವಾಗಿದೆ. 3ನೇ ಸಲ ದರ ಏರಿಕೆ ಮಾಡಲಾಗಿದೆ. 2023 ಆಗಸ್ಟ್ ತಿಂಗಳಲ್ಲಿ ₹3, 2024 ಜೂನ್ ತಿಂಗಳಿನಲ್ಲಿ ₹2 ಹಾಗೂ 2025 ಮಾರ್ಚ್, ಅಂದರೆ ಈಗ ₹4 ಏರಿಕೆ ಮಾಡಲಾಗಿದೆ. ಹಾಗೆಯೇ ವಿದ್ಯುತ್ ಕೂಡ ದುಬಾರಿ ಆಗಿದೆ. ಜನರಿಗೆ ವಿದ್ಯುತ್ ಶಾಕ್ ನೀಡಿದ್ದಾರೆ. ಈಗ ಎಲ್ಲರಿಗೂ ಪ್ರತೀ ಯೂನಿಟ್ಟಿಗೆ ₹36 ಪೈಸೆ ಬರೆ. ಮಹಾದೇವಪ್ಪನಿಗೂ ಶಾಕು! ಕಾಕಾ ಪಾಟೀಲಗೂ ಶಾಕು!! ಎಂದು ರಾಜ್ಯ ಸರ್ಕಾರದ ಬಗ್ಗೆ ಕೇಂದ್ರ ಸಚಿವರು ಲೇವಡಿ ಮಾಡಿದ್ದಾರೆ.
ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಕನ್ನಡಿಗರ ಪಾಲಿಗೆ ಮರಣಶಾಸನ. ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ. ನೆಪ ರೈತರದು, ಲಾಭ ಕೆಎಂಎಫ್ ಗೆ! ಕಂಪನಿ ಆಡಳಿತ ನಡೆಸುತ್ತಿದೆ ಸರಕಾರ! ಮೊಸರು ದರ ₹4 ಏರಿಕೆ ಮಾಡಿದ್ದೀರಿ. ಈ ಹಣ ಏನು ಮಾಡುತ್ತೀರಿ? ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ? ಸ್ಪಷ್ಟಪಡಿಸಿ ಎಂದು ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.
*ಇದು ಪ್ರಜಾಪ್ರಭುತ್ವ ಸರಕಾರವಲ್ಲ:*
ದರ ಏರಿಕೆ, ತೆರಿಗೆ ಹೇರಿಕೆ ಸರಕಾರ! ಇದು ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ! ಸುಲಿಗೆಯಷ್ಟೇ ನಿತ್ಯಕೃತ್ಯ. ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ. ಈಸ್ಟ್ ಇಂಡಿಯಾ ಕಾಂಗ್ರೆಸ್!! ಎಂದು ಅವರು ಕಿಡಿ ಕಾರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು