3:13 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ

28/03/2025, 19:53

*ರೈತರ ನೆಪದಲ್ಲಿ ಸರಕಾರ ಬಿಸ್ನೆಸ್ ಮಾಡುತ್ತಿದೆ*

*ಏರಿಕೆ ಹಣ ರೈತರಿಗೋ? ಅಥವಾ ಕೆಎಂಎಫ್ ಗೋ ಎಂದು ಪ್ರಶ್ನೆ*

ನವದೆಹಲಿ(reporterkarnataka.com): ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ಎರಡು ವರ್ಷಗಳ ಸರಣಿ ಸುಲಿಗೆ! ಯುಗಾದಿ ಹಬ್ಬಕ್ಕೆ ಬೆಲೆ ‘ಏರಿಕೆ ಹೋಳಿಗೆ!!’ ಎಂದು ಟಾಂಗ್ ನೀಡಿದ್ದಾರೆ.
ರಾಜ್ಯದಲ್ಲಿ ಹಾಲಿನ ಹಾಲಾಹಲ ಶುರುವಾಗಿದೆ. 3ನೇ ಸಲ ದರ ಏರಿಕೆ ಮಾಡಲಾಗಿದೆ. 2023 ಆಗಸ್ಟ್ ತಿಂಗಳಲ್ಲಿ ₹3, 2024 ಜೂನ್ ತಿಂಗಳಿನಲ್ಲಿ ₹2 ಹಾಗೂ 2025 ಮಾರ್ಚ್, ಅಂದರೆ ಈಗ ₹4 ಏರಿಕೆ ಮಾಡಲಾಗಿದೆ. ಹಾಗೆಯೇ ವಿದ್ಯುತ್ ಕೂಡ ದುಬಾರಿ ಆಗಿದೆ. ಜನರಿಗೆ ವಿದ್ಯುತ್ ಶಾಕ್ ನೀಡಿದ್ದಾರೆ. ಈಗ ಎಲ್ಲರಿಗೂ ಪ್ರತೀ ಯೂನಿಟ್ಟಿಗೆ ₹36 ಪೈಸೆ ಬರೆ. ಮಹಾದೇವಪ್ಪನಿಗೂ ಶಾಕು! ಕಾಕಾ ಪಾಟೀಲಗೂ ಶಾಕು!! ಎಂದು ರಾಜ್ಯ ಸರ್ಕಾರದ ಬಗ್ಗೆ ಕೇಂದ್ರ ಸಚಿವರು ಲೇವಡಿ ಮಾಡಿದ್ದಾರೆ.
ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಕನ್ನಡಿಗರ ಪಾಲಿಗೆ ಮರಣಶಾಸನ. ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ. ನೆಪ ರೈತರದು, ಲಾಭ ಕೆಎಂಎಫ್ ಗೆ! ಕಂಪನಿ ಆಡಳಿತ ನಡೆಸುತ್ತಿದೆ ಸರಕಾರ! ಮೊಸರು ದರ ₹4 ಏರಿಕೆ ಮಾಡಿದ್ದೀರಿ. ಈ ಹಣ ಏನು ಮಾಡುತ್ತೀರಿ? ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ? ಸ್ಪಷ್ಟಪಡಿಸಿ ಎಂದು ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.
*ಇದು ಪ್ರಜಾಪ್ರಭುತ್ವ ಸರಕಾರವಲ್ಲ:*
ದರ ಏರಿಕೆ, ತೆರಿಗೆ ಹೇರಿಕೆ ಸರಕಾರ! ಇದು ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ! ಸುಲಿಗೆಯಷ್ಟೇ ನಿತ್ಯಕೃತ್ಯ. ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ. ಈಸ್ಟ್ ಇಂಡಿಯಾ ಕಾಂಗ್ರೆಸ್!! ಎಂದು ಅವರು ಕಿಡಿ ಕಾರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು