2:45 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು…

ಇತ್ತೀಚಿನ ಸುದ್ದಿ

ರಾಜ್ಯ ಸರ್ಕಾರದಿಂದ ಚಾರಣಿಗರಿಗೆ ಸ್ಟ್ರಿಕ್ಟ್ ರೂಲ್ಸ್: 10 ಮಂದಿಗೊಬ್ಬರು ಗೈಡ್ ಕಡ್ಡಾಯ

18/04/2026, 12:41

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಹೆಚ್ಚುತ್ತಿರುವ ಚಾರಣ ಅಪಘಾತಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಕಾರ್ಯಾಚರಣೆ ವಿಧಾನ (SOP) ಜಾರಿಗೊಳಿಸಿದೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ, ಚಾರಣಕ್ಕೆ ಆನ್‌ಲೈನ್ ಬುಕ್ಕಿಂಗ್, ಪ್ರತಿ 10 ಮಂದಿಗೆ ಒಬ್ಬ ಗೈಡ್ ಹಾಗೂ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯವಾಗಿದೆ. ಸುರಕ್ಷಿತ ಚಾರಣಕ್ಕೆ ಅಗತ್ಯ ಉಪಕರಣಗಳು ಮತ್ತು ಕ್ಯಾರಿಂಗ್ ಕೆಪಾಸಿಟಿ ನಿಯಂತ್ರಣವೂ ಜಾರಿಗೆ ತರಲಾಗಿದೆ.
ರಾಜ್ಯದಲ್ಲಿ ಚಾರಣಕ್ಕೆ (Trekking) ತೆರಳಿ ಸಂಭವಿಸುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ಜಾರಿಗೆ ತಂದಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್‌ನಲ್ಲಿ ಎಸ್‌ಒಪಿ ಬಿಡುಗಡೆ ಮಾಡಿ ಮಹತ್ವದ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ 44 ಚಾರಣ ಪಾಯಿಂಟ್‌ಗಳು ಕಾರ್ಯನಿರ್ವಹಿಸುತ್ತಿವೆ. ಕೊಡಗು ತಡಿಯಾಂಡಮೊಳ್ ಸೇರಿದಂತೆ ಹಲವು ಕಡೆಗಳಲ್ಲಿ ಚಾರಣಕ್ಕೆ ತೆರಳಿದವರು ನಾಪತ್ತೆಯಾಗಿರುವುದು ಹಾಗೂ ಚಿಕ್ಕಮಗಳೂರಿನಲ್ಲಿ ಬಾಲಕಿ ಸಾವನ್ನಪ್ಪಿದ ಘಟನೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಹೊಸ ನಿಯಮಗಳ ಪ್ರಕಾರ, ಚಾರಣಿಗರು ಆನ್‌ಲೈನ್ ಮೂಲಕವೇ ಬುಕ್ಕಿಂಗ್ ಮಾಡಬೇಕು. 10 ಮಂದಿಗೆ ಒಬ್ಬ ಗೈಡ್ ಕಡ್ಡಾಯವಾಗಿದ್ದು, ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ. ಟ್ರೆಕಿಂಗ್ ಹೋಗುವವರ ಮೊಬೈಲ್‌ಗಳಲ್ಲಿ ಟ್ರ್ಯಾಕಿಂಗ್ ಆಪ್ ಅಳವಡಿಕೆ ಮಾಡಲಾಗುತ್ತದೆ. ಜೊತೆಗೆ ಗೈಡ್‌ಗಳಿಗೆ ಜಿಪಿಎಸ್ ಸೌಲಭ್ಯ ಇರುವ ವಾಕಿಟಾಕಿ ನೀಡಲಾಗುತ್ತದೆ ಎಂದಿದ್ದಾರೆ.
ಪ್ರತಿ ಸ್ಥಳದ ಕ್ಯಾರಿಂಗ್ ಕೆಪಾಸಿಟಿಯನ್ನು ನಿಯಂತ್ರಿಸಲಾಗಿದ್ದು, ಒಮ್ಮೆ 150 ಮಂದಿಗೆ ಮಾತ್ರ ಚಾರಣಕ್ಕೆ ಅವಕಾಶ ನೀಡಲಾಗುತ್ತದೆ. ಒಂದು ತಂಡ ಮರಳಿದ ಬಳಿಕವೇ ಮತ್ತೊಂದು ತಂಡವನ್ನು ಕಳುಹಿಸಲಾಗುತ್ತದೆ. ಟಾರ್ಚ್, ಹೆಡ್ ಲ್ಯಾಂಪ್ ಸೇರಿದಂತೆ ಅಗತ್ಯ ಸುರಕ್ಷತಾ ಉಪಕರಣಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಹೇಳಿರು ಖಂಡ್ರೆ, ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು