8:13 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿ ಬಗ್ಗೆ ರಾಜ್ಯ ಸರ್ಕಾರಕ್ಕೆ ಈಗ ಜ್ಞಾನೋದಯ: ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

20/02/2025, 23:35

ಹುಬ್ಬಳ್ಳಿ(reporterkarnataka.com): ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರಕ್ಕೆ ಈಗ ಜ್ಞಾನೋದಯ ಆಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ 10 ಕೆಜಿ ಪಡಿತರ ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ತಡವಾಗಿಯಾದರೂ ಎಚ್ಚೆತ್ತುಕೊಂಡಿದೆ ಎಂದರು.
ರಾಜ್ಯ ಸರ್ಕಾರ ತನ್ನ ಪಾಲಿನ 5 ಕೆಜಿ ಅಕ್ಕಿ ಬದಲು ₹34 ಹಣ ನೀಡುತ್ತಿತ್ತು. 6 ತಿಂಗಳ ಹಿಂದೆಯೇ ಕೇಂದ್ರ ಕಡಿಮೆ ಬೆಲೆಗೆ ಹೆಚ್ಚುವರಿ ಅಕ್ಕಿ ಕೊಡಲು ಸಿದ್ಧವೆಂದು ತಿಳಿಸಿದ್ದರೂ ಖರೀದಿಗೆ ಮುಂದಾಗಿರಲಿಲ್ಲ ಎಂದರು.
ರಾಜ್ಯ ಸರ್ಕಾರ ಅಕ್ಕಿ ಕೇಳಿದಾಗ ನಮ್ಮಲ್ಲಿ ಅಕ್ಕಿ ಇರಲಿಲ್ಲ. ಹಾಗಾಗಿ ಆಗ ಬಿಜೆಪಿ ಮತ್ತು ಬಿಜೆಪಿಯೇತರ ಅಧಿಕಾರವಿದ್ದ ಎಲ್ಲಾ ಸರ್ಕಾರಗಳಿಗೂ ಹೆಚ್ಚುವರಿ ಅಕ್ಕಿಯಿಲ್ಲ ಎಂದೇ ಹೇಳಲಾಗಿತ್ತು ಎಂದರು.
ಬಳಿಕ ಕೇಂದ್ರ ಸರ್ಕಾರ, ಜೂನ್ ವೇಳೆಗೆ ಹೆಚ್ಚುವರಿ ಅಕ್ಕಿ ಪೂರೈಸಲು ಸಿದ್ಧವೆಂದು ರಾಜ್ಯ ಆಹಾರ ಇಲಾಖೆ ಸಚಿವ ಮುನಿಯಪ್ಪ ಅವರಿಗೆ ತಿಳಿಸಿದರೆ, ರಾಜ್ಯ ಸರ್ಕಾರದಲ್ಲಿ ದುಡ್ಡು ಇಲ್ಲದ ಕಾರಣ ಖರೀದಿಗೆ ಮುಂದಾಗಿರಲಿಲ್ಲ ಎಂದರು ಜೋಶಿ.
ರಾಜ್ಯಕ್ಕೆ ಬೇಕಾದಷ್ಟು ಅಕ್ಕಿ ಲಭ್ಯವಿದೆ ಎಂದು ರಾಜ್ಯ ಸರ್ಕಾರಕ್ಕೆ ಅಧಿಕೃತ ಪತ್ರ ಬರೆದು 5 ತಿಂಗಳಾದರೂ ಪ್ರತಿಕ್ರಿಯಿಸಿರಲಿಲ್ಲ. ₹ 22.50 ಕಡಿಮೆ ಬೆಲೆ ವಿಧಿಸಿದರೂ ರಾಜ್ಯ ಸರ್ಕಾರ ಮನಸ್ಸು ಮಾಡಿರಲಿಲ್ಲ ಎಂದರು.
ರಾಜ್ಯದ ಜನಕ್ಕೆ ಇತ್ತ ಹೆಚ್ಚುವರಿ 5 ಕೆಜಿ ಅಕ್ಕಿಯೂ ಇಲ್ಲ, ಬದಲಿಗೆ ಹಣವನ್ನೂ ಸರ್ಕಾರ ಜಮೆ ಮಾಡುತ್ತಿರಲಿಲ್ಲ. ವಂಚನೆ ಬಹಿರಂಗಗೊಳ್ಳುತ್ತಿದ್ದಂತೆ ಈಗ ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿಗೆ ಮುಂದಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತಡವಾಗಿಯಾದರೂ ಜ್ಞಾನೋದಯವಾಗಿದೆ ಎಂದು ಪ್ರಲ್ಹಾದ ಜೋಶಿ ಟಾಂಗ್ ಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು