1:58 PM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿ ಬಗ್ಗೆ ರಾಜ್ಯ ಸರ್ಕಾರಕ್ಕೆ ಈಗ ಜ್ಞಾನೋದಯ: ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

20/02/2025, 23:35

ಹುಬ್ಬಳ್ಳಿ(reporterkarnataka.com): ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರಕ್ಕೆ ಈಗ ಜ್ಞಾನೋದಯ ಆಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ 10 ಕೆಜಿ ಪಡಿತರ ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ತಡವಾಗಿಯಾದರೂ ಎಚ್ಚೆತ್ತುಕೊಂಡಿದೆ ಎಂದರು.
ರಾಜ್ಯ ಸರ್ಕಾರ ತನ್ನ ಪಾಲಿನ 5 ಕೆಜಿ ಅಕ್ಕಿ ಬದಲು ₹34 ಹಣ ನೀಡುತ್ತಿತ್ತು. 6 ತಿಂಗಳ ಹಿಂದೆಯೇ ಕೇಂದ್ರ ಕಡಿಮೆ ಬೆಲೆಗೆ ಹೆಚ್ಚುವರಿ ಅಕ್ಕಿ ಕೊಡಲು ಸಿದ್ಧವೆಂದು ತಿಳಿಸಿದ್ದರೂ ಖರೀದಿಗೆ ಮುಂದಾಗಿರಲಿಲ್ಲ ಎಂದರು.
ರಾಜ್ಯ ಸರ್ಕಾರ ಅಕ್ಕಿ ಕೇಳಿದಾಗ ನಮ್ಮಲ್ಲಿ ಅಕ್ಕಿ ಇರಲಿಲ್ಲ. ಹಾಗಾಗಿ ಆಗ ಬಿಜೆಪಿ ಮತ್ತು ಬಿಜೆಪಿಯೇತರ ಅಧಿಕಾರವಿದ್ದ ಎಲ್ಲಾ ಸರ್ಕಾರಗಳಿಗೂ ಹೆಚ್ಚುವರಿ ಅಕ್ಕಿಯಿಲ್ಲ ಎಂದೇ ಹೇಳಲಾಗಿತ್ತು ಎಂದರು.
ಬಳಿಕ ಕೇಂದ್ರ ಸರ್ಕಾರ, ಜೂನ್ ವೇಳೆಗೆ ಹೆಚ್ಚುವರಿ ಅಕ್ಕಿ ಪೂರೈಸಲು ಸಿದ್ಧವೆಂದು ರಾಜ್ಯ ಆಹಾರ ಇಲಾಖೆ ಸಚಿವ ಮುನಿಯಪ್ಪ ಅವರಿಗೆ ತಿಳಿಸಿದರೆ, ರಾಜ್ಯ ಸರ್ಕಾರದಲ್ಲಿ ದುಡ್ಡು ಇಲ್ಲದ ಕಾರಣ ಖರೀದಿಗೆ ಮುಂದಾಗಿರಲಿಲ್ಲ ಎಂದರು ಜೋಶಿ.
ರಾಜ್ಯಕ್ಕೆ ಬೇಕಾದಷ್ಟು ಅಕ್ಕಿ ಲಭ್ಯವಿದೆ ಎಂದು ರಾಜ್ಯ ಸರ್ಕಾರಕ್ಕೆ ಅಧಿಕೃತ ಪತ್ರ ಬರೆದು 5 ತಿಂಗಳಾದರೂ ಪ್ರತಿಕ್ರಿಯಿಸಿರಲಿಲ್ಲ. ₹ 22.50 ಕಡಿಮೆ ಬೆಲೆ ವಿಧಿಸಿದರೂ ರಾಜ್ಯ ಸರ್ಕಾರ ಮನಸ್ಸು ಮಾಡಿರಲಿಲ್ಲ ಎಂದರು.
ರಾಜ್ಯದ ಜನಕ್ಕೆ ಇತ್ತ ಹೆಚ್ಚುವರಿ 5 ಕೆಜಿ ಅಕ್ಕಿಯೂ ಇಲ್ಲ, ಬದಲಿಗೆ ಹಣವನ್ನೂ ಸರ್ಕಾರ ಜಮೆ ಮಾಡುತ್ತಿರಲಿಲ್ಲ. ವಂಚನೆ ಬಹಿರಂಗಗೊಳ್ಳುತ್ತಿದ್ದಂತೆ ಈಗ ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿಗೆ ಮುಂದಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತಡವಾಗಿಯಾದರೂ ಜ್ಞಾನೋದಯವಾಗಿದೆ ಎಂದು ಪ್ರಲ್ಹಾದ ಜೋಶಿ ಟಾಂಗ್ ಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು