5:51 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿ ಬಗ್ಗೆ ರಾಜ್ಯ ಸರ್ಕಾರಕ್ಕೆ ಈಗ ಜ್ಞಾನೋದಯ: ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

20/02/2025, 23:35

ಹುಬ್ಬಳ್ಳಿ(reporterkarnataka.com): ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರಕ್ಕೆ ಈಗ ಜ್ಞಾನೋದಯ ಆಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ 10 ಕೆಜಿ ಪಡಿತರ ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ತಡವಾಗಿಯಾದರೂ ಎಚ್ಚೆತ್ತುಕೊಂಡಿದೆ ಎಂದರು.
ರಾಜ್ಯ ಸರ್ಕಾರ ತನ್ನ ಪಾಲಿನ 5 ಕೆಜಿ ಅಕ್ಕಿ ಬದಲು ₹34 ಹಣ ನೀಡುತ್ತಿತ್ತು. 6 ತಿಂಗಳ ಹಿಂದೆಯೇ ಕೇಂದ್ರ ಕಡಿಮೆ ಬೆಲೆಗೆ ಹೆಚ್ಚುವರಿ ಅಕ್ಕಿ ಕೊಡಲು ಸಿದ್ಧವೆಂದು ತಿಳಿಸಿದ್ದರೂ ಖರೀದಿಗೆ ಮುಂದಾಗಿರಲಿಲ್ಲ ಎಂದರು.
ರಾಜ್ಯ ಸರ್ಕಾರ ಅಕ್ಕಿ ಕೇಳಿದಾಗ ನಮ್ಮಲ್ಲಿ ಅಕ್ಕಿ ಇರಲಿಲ್ಲ. ಹಾಗಾಗಿ ಆಗ ಬಿಜೆಪಿ ಮತ್ತು ಬಿಜೆಪಿಯೇತರ ಅಧಿಕಾರವಿದ್ದ ಎಲ್ಲಾ ಸರ್ಕಾರಗಳಿಗೂ ಹೆಚ್ಚುವರಿ ಅಕ್ಕಿಯಿಲ್ಲ ಎಂದೇ ಹೇಳಲಾಗಿತ್ತು ಎಂದರು.
ಬಳಿಕ ಕೇಂದ್ರ ಸರ್ಕಾರ, ಜೂನ್ ವೇಳೆಗೆ ಹೆಚ್ಚುವರಿ ಅಕ್ಕಿ ಪೂರೈಸಲು ಸಿದ್ಧವೆಂದು ರಾಜ್ಯ ಆಹಾರ ಇಲಾಖೆ ಸಚಿವ ಮುನಿಯಪ್ಪ ಅವರಿಗೆ ತಿಳಿಸಿದರೆ, ರಾಜ್ಯ ಸರ್ಕಾರದಲ್ಲಿ ದುಡ್ಡು ಇಲ್ಲದ ಕಾರಣ ಖರೀದಿಗೆ ಮುಂದಾಗಿರಲಿಲ್ಲ ಎಂದರು ಜೋಶಿ.
ರಾಜ್ಯಕ್ಕೆ ಬೇಕಾದಷ್ಟು ಅಕ್ಕಿ ಲಭ್ಯವಿದೆ ಎಂದು ರಾಜ್ಯ ಸರ್ಕಾರಕ್ಕೆ ಅಧಿಕೃತ ಪತ್ರ ಬರೆದು 5 ತಿಂಗಳಾದರೂ ಪ್ರತಿಕ್ರಿಯಿಸಿರಲಿಲ್ಲ. ₹ 22.50 ಕಡಿಮೆ ಬೆಲೆ ವಿಧಿಸಿದರೂ ರಾಜ್ಯ ಸರ್ಕಾರ ಮನಸ್ಸು ಮಾಡಿರಲಿಲ್ಲ ಎಂದರು.
ರಾಜ್ಯದ ಜನಕ್ಕೆ ಇತ್ತ ಹೆಚ್ಚುವರಿ 5 ಕೆಜಿ ಅಕ್ಕಿಯೂ ಇಲ್ಲ, ಬದಲಿಗೆ ಹಣವನ್ನೂ ಸರ್ಕಾರ ಜಮೆ ಮಾಡುತ್ತಿರಲಿಲ್ಲ. ವಂಚನೆ ಬಹಿರಂಗಗೊಳ್ಳುತ್ತಿದ್ದಂತೆ ಈಗ ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿಗೆ ಮುಂದಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತಡವಾಗಿಯಾದರೂ ಜ್ಞಾನೋದಯವಾಗಿದೆ ಎಂದು ಪ್ರಲ್ಹಾದ ಜೋಶಿ ಟಾಂಗ್ ಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು