2:17 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿ ಬಗ್ಗೆ ರಾಜ್ಯ ಸರ್ಕಾರಕ್ಕೆ ಈಗ ಜ್ಞಾನೋದಯ: ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

20/02/2025, 23:35

ಹುಬ್ಬಳ್ಳಿ(reporterkarnataka.com): ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರಕ್ಕೆ ಈಗ ಜ್ಞಾನೋದಯ ಆಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ 10 ಕೆಜಿ ಪಡಿತರ ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ತಡವಾಗಿಯಾದರೂ ಎಚ್ಚೆತ್ತುಕೊಂಡಿದೆ ಎಂದರು.
ರಾಜ್ಯ ಸರ್ಕಾರ ತನ್ನ ಪಾಲಿನ 5 ಕೆಜಿ ಅಕ್ಕಿ ಬದಲು ₹34 ಹಣ ನೀಡುತ್ತಿತ್ತು. 6 ತಿಂಗಳ ಹಿಂದೆಯೇ ಕೇಂದ್ರ ಕಡಿಮೆ ಬೆಲೆಗೆ ಹೆಚ್ಚುವರಿ ಅಕ್ಕಿ ಕೊಡಲು ಸಿದ್ಧವೆಂದು ತಿಳಿಸಿದ್ದರೂ ಖರೀದಿಗೆ ಮುಂದಾಗಿರಲಿಲ್ಲ ಎಂದರು.
ರಾಜ್ಯ ಸರ್ಕಾರ ಅಕ್ಕಿ ಕೇಳಿದಾಗ ನಮ್ಮಲ್ಲಿ ಅಕ್ಕಿ ಇರಲಿಲ್ಲ. ಹಾಗಾಗಿ ಆಗ ಬಿಜೆಪಿ ಮತ್ತು ಬಿಜೆಪಿಯೇತರ ಅಧಿಕಾರವಿದ್ದ ಎಲ್ಲಾ ಸರ್ಕಾರಗಳಿಗೂ ಹೆಚ್ಚುವರಿ ಅಕ್ಕಿಯಿಲ್ಲ ಎಂದೇ ಹೇಳಲಾಗಿತ್ತು ಎಂದರು.
ಬಳಿಕ ಕೇಂದ್ರ ಸರ್ಕಾರ, ಜೂನ್ ವೇಳೆಗೆ ಹೆಚ್ಚುವರಿ ಅಕ್ಕಿ ಪೂರೈಸಲು ಸಿದ್ಧವೆಂದು ರಾಜ್ಯ ಆಹಾರ ಇಲಾಖೆ ಸಚಿವ ಮುನಿಯಪ್ಪ ಅವರಿಗೆ ತಿಳಿಸಿದರೆ, ರಾಜ್ಯ ಸರ್ಕಾರದಲ್ಲಿ ದುಡ್ಡು ಇಲ್ಲದ ಕಾರಣ ಖರೀದಿಗೆ ಮುಂದಾಗಿರಲಿಲ್ಲ ಎಂದರು ಜೋಶಿ.
ರಾಜ್ಯಕ್ಕೆ ಬೇಕಾದಷ್ಟು ಅಕ್ಕಿ ಲಭ್ಯವಿದೆ ಎಂದು ರಾಜ್ಯ ಸರ್ಕಾರಕ್ಕೆ ಅಧಿಕೃತ ಪತ್ರ ಬರೆದು 5 ತಿಂಗಳಾದರೂ ಪ್ರತಿಕ್ರಿಯಿಸಿರಲಿಲ್ಲ. ₹ 22.50 ಕಡಿಮೆ ಬೆಲೆ ವಿಧಿಸಿದರೂ ರಾಜ್ಯ ಸರ್ಕಾರ ಮನಸ್ಸು ಮಾಡಿರಲಿಲ್ಲ ಎಂದರು.
ರಾಜ್ಯದ ಜನಕ್ಕೆ ಇತ್ತ ಹೆಚ್ಚುವರಿ 5 ಕೆಜಿ ಅಕ್ಕಿಯೂ ಇಲ್ಲ, ಬದಲಿಗೆ ಹಣವನ್ನೂ ಸರ್ಕಾರ ಜಮೆ ಮಾಡುತ್ತಿರಲಿಲ್ಲ. ವಂಚನೆ ಬಹಿರಂಗಗೊಳ್ಳುತ್ತಿದ್ದಂತೆ ಈಗ ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿಗೆ ಮುಂದಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತಡವಾಗಿಯಾದರೂ ಜ್ಞಾನೋದಯವಾಗಿದೆ ಎಂದು ಪ್ರಲ್ಹಾದ ಜೋಶಿ ಟಾಂಗ್ ಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು