5:21 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

07/02/2026, 20:43

ಗದಗ(reporterkarnataka.com): ರಾಜ್ಯ ಸರ್ಕಾರ ಅಲ್ಪ ಸಂಖ್ಯಾತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ನಿರಂತರ ಒಲೈಕೆ ರಾಜಕಾರಣ ಮಾಡುತ್ತ ಬಂದಿದ್ದು. ಹಿಂದುಳಿದವರು, ಬಡವರು, ರೈತರ ಸಾಲ ಮನ್ನಾ ಎಲ್ಲರಿಗೂ ಮಾಡಬೇಕಿತ್ತು. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಆತ್ಮಹತ್ಯೆಗೆ ಸರಿಯಾಗಿ ಪರಿಹಾರ ಕೊಡುತ್ತಿಲ್ಲ. ಇನ್ಶುರೆನ್ಸ್ ಕೊಡುತ್ತಿಲ್ಲ. ಬಡ್ಡಿ ಮನ್ನಾ ಕೂಡ ಮಾಡುತ್ತಿಲ್ಲ. ಶೇ 80% ರಷ್ಟು ಜನರು ಸಂಕಷ್ಟದಲ್ಲಿದ್ದಾರೆ. ಜನ ವಿರೋಧಿ ನೀತಿಯನ್ನು ಈ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸ್ಥಳಿಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಸಲು ಮುಂದಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ಪ್ರಗತಿಪರ ರಾಜ್ಯ ಐಟಿ ಬಿಟಿ ರಾಜ್ಯ ಇದನ್ನು ಮತ್ತೆ ಪ್ರಾಚೀನತೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಚುನಾವಣಾ ಆಯೋಗ ಹ್ಯಾಕ್ ಮಾಡುವ ಬಗ್ಗೆ ತೋರಿಸಿ ಎಂದು ಕರೆದರೂ ಕಾಂಗ್ರೆಸ್ ಭಾಗವಸುತ್ತಿಲ್ಲ.‌ ಯಾವ ಇವಿಎಂ ಚುನಾವಣೆ ಮೂಲಕ ಗೆದ್ದಿದ್ದಾರೆ ಅದನ್ನೆ ತಿರಸ್ಕಾರ ಮಾಡುತ್ತಿದ್ದಾರೆ. ಇದನ್ನು ರಾಜ್ಯದ ಜನರು ಕ್ಷಮಿಸುವುದಿಲ್ಲ. ಮೊದಲು ರಾಜಿನಾಮೆ ಕೊಟ್ಟು ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ಎದುರಿಸಿ.
ಭಾರತದ ಚುನಾವಣೆ ಆಯೋದಗ ಪ್ರತಿನಿಧಿಗಳು ಆಫ್ರಿಕಾ ಯುರೋಪ್ ಬೇರೆ ಬೇರೆ ದೇಶಕ್ಕೆ ಹೋಗುತ್ತಾರೆ. ಅಲ್ಲಿ ಸಮಸ್ಯೆ ಇದ್ದರೆ ಅದನ್ನು ಪರಿಹರಿಸಲು ನಮ್ಮ ಚುನಾವಣೆ ಆಯೋಗದ ಅಧಿಕಾರಿಗಳು ಹೋಗುತ್ತಾರೆ ಅದರ ಬಗ್ಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಪತ್ರಿಕೆಗಳಲ್ಲಿ ಮಹಾತ್ಮಾ ಗಾಂಧಿಜಿ ಕುರಿತು ಬಿಜೆಪಿ ನೀಡಿರುವ ಜಾಹೀರಾತಿನ ವಿರುದ್ದ ಕಾಂಗ್ರೆಸ್ ಆರೋಪ ಮಾಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಜಾಹೀರಾತನ್ನು ಅವರು ನೀಡಿದ್ದಕ್ಕೆ ಏನು ಹೇಳುತ್ತಾರೆ. ಅಹಿಂಸೆಯ ಮೇಲೆ ನಂಬಿಕೆ ಇಟ್ಟಿದ್ದ ಗಾಂಧಿಜಿ ಬೇಜಾರಾಗಿದ್ದಾರೆ ಎಂದು ಹೇಳಿದರು.

*ನಾಟಕ ನಿಲ್ಲಿಸಿ:*
ನಾಯಕತ್ವ ಬದಲಾವಣೆಯ ಗೊಂದಲ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ. ಅವರು, ಯತೀಂದ್ರ ಅವರು ಯಾಕೆ ಹೇಳುತ್ತಾರೊ ಗೊತ್ತಿಲ್ಲ. ಸಿಎಂ ಹಲವಾರು ಬಾರಿ ಹೇಳಿದರೂ ಅವರ ಮಗನೇ ಸರ್ಟಿಪಿಕೆಟ್ ಕೊಡುತ್ತಿದ್ದಾರೆ‌. ಮಗನ ಸರ್ಟಿಫಿಕೆಟ್ ಇಟ್ಡುಕೊಂಡು ರಾಜ್ಯ ಆಳುವ ಅಗತ್ಯ ಇಲ್ಲ. ಕಾಂಗ್ರೆಸ್ ಹೈ ಕಮಾಂಡ್ ಏನು ಮಾಡುತ್ತಿದೆ. ಕೂಡಲೇ ನಾಟಕ ಬಂದ್ ಮಾಡಿ ರಾಜ್ಯದ ಅಭಿವೃದ್ಧಿ ಕಡೆ ಗಮನ ಕೊಡಿ ಇದರಿಂದ ರಾಜ್ಯದ ಜನರು ರೋಸಿಹೋಗಿದ್ದಾರೆ ಎಂದು ಹೇಳಿದರು.
ಗದಗನಲ್ಲಿ ಕೇಂದ್ರೀಯ ವಿದ್ಯಾಲಯ ಆರಂಭಿಸುವ ಕುರಿತು ಕೇಳಿದ ಪ್ರಶ್ನೆಗೆ ನಾನು ಮಾನವ ಸಂಪನ್ಮೂಲ ಸಚಿವರ ಜೊತೆಗೆ ಮಾತನಾಡಿದ್ದೇನೆ. ಜಾಗದ ಸಮಸ್ಯೆ ಪರಿಹರಿಸಿ ಕಳುಹಿಸಿದರೆ ಬರುವಂತಹ ಶೈಕ್ಷಣಿಕ ವರ್ಷದಲ್ಲಿ ಕೇಂದ್ರಿಯ ವಿದ್ಯಾಲಯ ಆರಂಭಿಸುವುದಾಗಿ ಹೇಳಿದ್ದಾರೆ ಎಂದರು.

*ಲಕ್ಕುಂಡಿ ಯುನೆಸ್ಕೊ ಸೇರಿದರೆ ಒಳ್ಳೆಯದು:*
ಲಕ್ಕುಂಡಿಯಲ್ಲಿ ಉತ್ಖನನ ನಡೆಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಉತ್ಖನ ಈ ಹಿಂದೆ ನಡೆದಿದ್ದರಿಂದ ಪ್ರಸಿದ್ದಿಗೆ ಬಂದಿದೆ. ಈಗ ಊಹಾಪೋಹಾ ಕೇಳಿ ಬರುತ್ತಿವೆ. ಅದು ಏನಾಗುತ್ತದೆ ಗೊತ್ತಿಲ್ಲ. ಲಕ್ಕುಂಡಿಯನ್ನು ಯುನೆಸ್ಕೊ ಗೆ ಸೇರಿಸುವ ಪ್ರಯತ್ನ ಒಳ್ಳೆಯದು ಅದು ಸೇರಿದರೆ ಪ್ರವಾಸೋದ್ಯಮ ದೃಷ್ಟಿಯಿಂದ ಅನುಕೂಲ ಆಗುತ್ತದೆ ಎಂದು ಹೇಳಿದರು.

*ಮೆಟ್ರೊ ದರ ಏರಿಕೆ ವಾಪಸ್ ಪಡೆಯಲಿ:*
ನಮ್ಮ ಮೆಟ್ರೊ ದರ ಏರಿಕೆ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೆಟ್ರೊ ದರ ಏರಿಕೆ ಕೇಂದ್ರಕ್ಕೆ ಸಂಬಂಧ ಇಲ್ಲ ಅದು ಒಂದು ಕಂಪನಿ, ಇದರ ಎಂಡಿ ಅವರೆ ಅಂತಿಮ ತೀರ್ಮಾನ ಮಾಡುತ್ತಾರೆ. ರಾಜ್ಯ ಸರ್ಕಾರ ಹೆಚ್ಚಳ ಮಾಡಿರುವ ತೀರ್ಮಾನವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು