6:34 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಹಾಸನದಲ್ಲಿ ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ ಕ್ರೀಡಾಕೂಟ: ಬ್ಯಾಟಿಂಗ್ ಮೂಲಕ ಸಂಸದ ಶ್ರೇಯಸ್ ಪಟೇಲ್ ಚಾಲನೆ

12/04/2025, 20:54

ಹಾಸನ(reporterkarnataka.com): ಹಾಸನದಲ್ಲಿ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಎರಡು ದಿನದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಸಂಸದ ಶ್ರೇಯಸ್ ಪಟೇಲ್ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸದಾ ಒತ್ತಡದಲ್ಲಿರುವ ಪತ್ರಕರ್ತರು ಒಂದೆಡೆ ಸೇರಿ ಕ್ರಿಕೆಟ್ ಆಡುವ ಮೂಲಕ ಒತ್ತಡ ನೀಗಿಸಿಕೊಳ್ಳುವ ಪ್ರಯತ್ನ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಕ್ರೀಡೆಯಲ್ಲಿ ಮಾತ್ರ ಯಾವುದೇ ಬೇದಭಾವ ಕಾಣಲು ಸಾಧ್ಯವಿಲ್ಲ. ಆದ್ದರಿಂದಲೇ ಕ್ರೀಡಾ ಮನೋಭಾವ ಗಳಿಸಿಕೊಳ್ಳುವ ಮೂಲಕ ಸೋಲು ಗೆಲುವು ಸಮಾನವಾಗಿ ಸ್ವೀಕಾರ ಮಾಡಬೇಕು ಎಂದು ಕರೆ ನೀಡಿದರು.


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪ್ರತಿ ವರ್ಷವೂ ಪತ್ರಕರ್ತರಿಗಾಗಿಯೇ ಕ್ರೀಡಾಕೂಟ ಆಯೋಜನೆ ಮಾಡಲಾಗುತ್ತಿದೆ. ಈ ಬಾರಿ 24 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ವಿಶೇಷ ಎಂದರು.
ರಾಜ್ಯ ಸಮಿತಿ ಸದಸ್ಯ ಎಚ್.ಬಿ.ಮದನಗೌಡ, ಕೆಯುಡಬ್ಲ್ಯೂಜೆ
ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಉಪಾಧ್ಯಕ್ಷರಾದ ಅಜ್ಜಮಾಡ ಕುಟ್ಟಪ್ಪ, ಭವಾನಿಸಿಂಗ್ ಠಾಕೂರ್, ಪುಂಡಲೀಕ ಬಾಳೋಜಿ, ಖಜಾಂಚಿ ವಾಸುದೇವ ಹೊಳ್ಳ, ಕಾರ್ಯದರ್ಶಿಗಳಾದ ಮತ್ತಿಕೆರೆ ಜಯರಾಂ, ಸೋಮಶೇಖರ ಕೆರಗೋಡು, ನಿಂಗಪ್ಪ ಚಾವಡಿ, ಜಿಲ್ಲಾ ಸಂಘದ ಅಧ್ಯಕ್ಷ ವೇಣುಕುಮಾರ್ , ಸಣ್ಣಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಜೆ.ಆರ್.ಕೆಂಚೇಗೌಡ, ಎನ್.ರವಿಕುಮಾರ್ ಪದಾಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು