5:19 PM Tuesday5 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

19ನೇ ರಾಜ್ಯ ಮಟ್ಟದ ಅಂತರ್‌ ಕ್ಲಬ್ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟ ; ರೋಟರ‌್ಯಾಕ್ಟ್ ಕ್ಲಬ್ ಮಂಗಳೂರು ಸಿಟಿಗೆ ಪ್ರಶಸ್ತಿ

14/06/2025, 08:11

ಮಂಗಳೂರು (reporterkarnataka.com)
ಜಿಲ್ಲಾ ರೋಟರಾಕ್ಟ್ ಸಂಸ್ಥೆಯ ಮತ್ತು ರೋಟರಾಕ್ಟ್ ಮಂಗಳೂರು ಸಿಟಿ‌ ಸಂಸ್ಥೆಯ ಜಂಟಿ ಆಶ್ರಯದಲ್ಲಿ ರೋಟರಾಕ್ಟ್ ಮಾಹಿತಿ ಮತ್ತು ಜಾಗೃತಿ ಅಭಿಯಾನದ ಅಂಗವಾಗಿ ದಿ| ರೋ. ಶಾಂತಾರಾಮ್ ವಾಮಂಜೂರು ಸ್ಮಾರಕ 19ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ್‌ ಕ್ಲಬ್ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟ ಸಂಸ್ಥೆಯ ಸಭಾಪತಿ ರೋ। ಡಾ| ದೇವದಾಸ್ ರೈ ನೇತೃತ್ವದಲ್ಲಿ ಇತ್ತೀಚೆಗೆ ನಗರದ ಈಡನ್ ಕ್ಲಬ್ ಸಭಾಂಗಣದಲ್ಲಿ ಜರಗಿತು.

ರೋಟರಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯನ್ನು ಪ್ರತಿನಿಧಿಸಿದ ರೋ। ಸಾತ್ವಿಕ್ ಕೊಟೆಕಾರ್ ಮತ್ತು ರೋ ಶಮನ್ ಜೋಡಿ ಪ್ರಥಮ ಸ್ಥಾನ ಗಳಿಸಿತು. ರೋಟರಾಕ್ಟ್ ಕ್ಲಬ್ ನವಚೈತನ್ಯ. ಬೆಂಗಳೂರು ಸಂಸ್ಥೆಯನ್ನು ಪ್ರತಿನಿಧಿಸಿದ ರೋ। ಶ್ರೀಖರ್ ದ್ವಿತೀಯ ಸ್ಥಾನ ಪಡೆದರು.

ಖ್ಯಾತ ತುಳು ಚಲನಚಿತ್ರ ನಟ ಬೋಜರಾಜ ವಾಮಂಜೂರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ತಮ್ಮ ದಿವಂಗತ ಸಹೋದರ ರೋ। ಶಾಂತಾರಾಮ್ ವಾಮಂಜೂರು ಸ್ಮರಣಾರ್ಥ ವರ್ಷಂಪ್ರತಿ ಈ ಸ್ಪರ್ಧಾಕೂಟವನ್ನು ಆಯೋಜಿಸುವ ರೋಟರಾಕ್ಟ್ ಸಂಸ್ಥೆಯ ನಿಸ್ವಾರ್ಥ ಸಮಾಜಸೇವಾ ಕಾರ್ಯ ಶ್ಲಾಘನೀಯ ಎಂದು ನುಡಿದು ರೋಟರಾಕ್ಟ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿ, ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಅಂತರಾಷ್ಟ್ರೀಯ ರೋಟರಾಕ್ಟ್ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಗುಂಟೂರು ನಗರ ಮೂಲದ ರೋ। ರವಿ ವಡ್ಡಮಣಿಯವರು ಗೌರವ ಅತಿಥಿಯಾಗಿ ಪಾಲ್ಗೊಂಡು, ರೋಟರಾಕ್ಟ್ ಸಂಸ್ಥೆಯ ಯುವ ಸದಸ್ಯರು ಸಂಸ್ಥೆಯ ಧೈಯ, ನೀತಿ, ಮಾಹಿತಿ, ಉದ್ದೇಶಗಳ ಜ್ಞಾನವನ್ನು ವೃದ್ಧಿಸಬೇಕು ಮತ್ತು ಸಂಸ್ಥೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಸಲಹೆ ನೀಡಿ ಸ್ಪರ್ಧಾ ವಿಜೇತರನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ರೋಟರಾಕ್ಟ್ ಜಿಲ್ಲಾ ಚುನಾಯಿತ ಪ್ರತಿನಿಧಿ ಮೈಸೂರು ನಗರ ಮೂಲದ ರೋ। ಪ್ರಜ್ವಲ್, ರೋಟರಾಕ್ಟ್ ದಕ್ಷಿಣ ಏಷ್ಯಾದ ಸಂಸ್ಥೆಯ ಅಧ್ಯಕ್ಷ ಡೇರಿಲ್ ಡಿ’ಸೋಜಾ, ರೋಟರಿ ಮಂಗಳೂರು ಸೆಂಟ್ರಲ್ ಸಂಸ್ಥೆಯ ಚುನಾಯಿತ ಅಧ್ಯಕ್ಷರಾದ ರೋ। ಭಾಸ್ಕರ್ ರೈ, ಶ್ರೀಮತಿ ವಾಣಿ ವಾಮಂಜೂರ್ ಉಪಸ್ಥಿತರಿದ್ದರು. ರೋಟರಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಅಧ್ಯಕ್ಷರಾದ ರೋ। ಅವಿನಾಶ್ ಅಧ್ಯಕ್ಷತೆ ವಹಿಸಿದ್ದರು.

ಮೈಸೂರು, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯ 10 ತಂಡಗಳು ಅಂತಿಮ ಮತ್ತು ನಿರ್ಣಾಯಕ ಸುತ್ತಿಗೆ ಪ್ರವೇಶ ಪಡೆದಿದ್ದವು. ಈ ಸ್ಪರ್ಧಾಕೂಟವನ್ನು ರೋಟರಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಸಭಾಪತಿಯವರಾದ ರೋ। ಡಾ। ದೇವದಾಸ್ ರೈ ನಿರೂಪಿಸಿದ್ದರು. ಕಾರ್ಯದರ್ಶಿ ರೋ। ಅಕ್ಷಯ್ ರೈ ವಂದಿಸಿದರು.

ರೋ। ದಿ। ಶಾಂತಾರಾಮ್ ವಾಮಂಜೂರ್‌ರವರು ಸಂಸ್ಥೆಯ ನಿಷ್ಠಾವಂತ ಸದಸ್ಯರಾಗಿದ್ದು, ನಿಸ್ವಾರ್ಥ ಸೇವಾ ಮನೋಭಾವ ಹೊಂದಿದ್ದು, 2006 ರಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆಕಸ್ಮಿಕ ವಾಹನ ರಸ್ತೆ ಅಪಘಾತದ ದುರಂತದಲ್ಲಿ ವಿಧಿವಶರಾಗಿದ್ದರು. ಅವರ ಸ್ಮರಣಾರ್ಥ ಪ್ರತಿವರ್ಷ ವಾರ್ಷಿಕ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟವನ್ನು ಆಯೋಜಿಸಲಾಗುವುದು ಎಂದು ಡಾ| ದೇವದಾಸ್ ರೈಯವರು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು