2:00 PM Wednesday18 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

ರಾಜ್ಯಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ಎಸ್.ಜೆ.ಇ.ಸಿ. ಮಹಿಳಾ ತಂಡ ಚಾಂಪಿಯನ್

17/09/2025, 21:19

ಮಂಗಳೂರು(reporterkarnataka.com): ವಾಮಂಜೂರಿನ ಸೈಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಮಹಿಳಾ ಶಟ್ಲ್ ಬ್ಯಾಡ್ಮಿಂಟನ್ ತಂಡವು ಸಪ್ಟೆಂಬರ್ 11 ಮತ್ತು 12 ರಂದು ಮಂಡ್ಯದ ಪಿ.ಎಸ್. ಸಿ. ಇ. ನಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿಜೇತರ ಟ್ರೋಫಿಯನ್ನು ಪಡೆದುಕೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿತು. ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ತೃತೀಯ ವರ್ಷದ ಟ್ರಿವಿಯಾ ಕ್ರೆಡಾ ವೇಗಸ್ ಅವರಿಗೆ ಪಂದ್ಯಾವಳಿಯ ಅತ್ಯುತ್ತಮ ಮಹಿಳಾ ಆಟಗಾರ್ತಿ ಪ್ರಶಸ್ತಿ ದೊರಕಿತು. ಕ್ರೀಡಾ ಶಿಕ್ಷಣ ನಿರ್ದೇಶಕಿ (ಪಿಇಡಿ) ವನೀಶಾ ವಿ. ರೊಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ಅವರ ಮಾರ್ಗದರ್ಶನದಲ್ಲಿ ತಂಡಗಳು ಶ್ರೇಷ್ಠ ಕೌಶಲ್ಯವನ್ನು ಪ್ರದರ್ಶಿಸಿದವು. ವಿಜೇತ ತಂಡವು ಟ್ರಿವಿಯಾ ಕ್ರೆಡಾ ವೇಗಸ್ , ತ್ರಿಶಾ ಕ್ಲಾರಿಸ್ ವೇಗಸ್, ಕ್ರಿಸ್ಟಲ್ ಡ್ಯಾಪ್ನಿ ಮೊಂತೇರೊ ಸೇರಿದಂತೆ ಅನೇಕ ವಿಭಾಗಗಳ ಪ್ರತಿಭಾನ್ವಿತ ಆಟಗಾರರನ್ನು ಒಳಗೊಂಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು